ಕರ್ನಾಟಕ

karnataka

By

Published : Nov 13, 2019, 11:14 PM IST

Updated : Nov 14, 2019, 12:34 PM IST

ETV Bharat / sitara

ಕಿತ್ತೂರು ಚನ್ನಮ್ಮನಲ್ಲ, ಮದರ್​​​ ಥೆರೇಸ ಅಲ್ಲ: ಕಣ್ಸನ್ನೆ ಹುಡುಗಿ​ ಬಗ್ಗೆ ಜಗ್ಗೇಶ್​​ ಬೇಸರ

ಸ್ವಂತಂತ್ರ ಹೋರಾಟಗಾರ್ತಿಯಂತು ಅಲ್ಲವೇ ಅಲ್ಲಾ. ಹೋಗಲಿ ನೂರು ಸಿನಿಮಾ ನಟಿಯಂತು ಅಲ್ಲಾ. ಸಾಹಿತಿ ಅಲ್ಲಾ. ಅನಾಥ ಮಕ್ಕಳಿಗೆ ಮಹಾ ತಾಯಿ ಅಲ್ಲಾ. ಆಧುನಿಕ ಮದರ್ ತೆರೆಸಾ ಅಲ್ಲಾ. ನೂರಾರು ಮರ ನೆಟ್ಟ ಸಾಲು ಮರದ ತಿಮ್ಮಕ್ಕ ಅಲ್ಲಾ ಎಂದು ಪ್ರಿಯಾ ಪ್ರಕಾಶ್​ ವಾರಿಯರ್​ ಬಗ್ಗೆ ಜಗ್ಗೇಶ್​ ಕಿಡಿಕಾರಿದ್ದಾರೆ.

ಪ್ರಿಯಾ ಪ್ರಕಾಶ್​ ವಾರಿಯರ್​ ಮತ್ತು ಜಗ್ಗೇಶ್

ನವರಸ ನಾಯಕ ಜಗ್ಗೇಶ್​​ ಕಣ್​​​ ಸನ್ನೆಯ ಬೆಡಗಿ ಪ್ರಿಯಾ ವಾರಿಯರ್​ ಬಗ್ಗೆ ಕಿಡಿ ಕಾರಿದ್ದಾರೆ. ನಿರ್ಮಾಪಕ ಮಂಜು ಆಹ್ವಾನದ ಮೇರೆಗೆ ಒಕ್ಕಲಿಗರ ವಿದ್ಯಾಸಂಸ್ಥೆ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿದ್ದು, ಈ ಕಾರ್ಯಕ್ರಮದಲ್ಲಿ ಪ್ರಿಯಾ ವಾರಿಯರ್​ ಕೂಡ ಭಾಗಿಯಾಗಿದ್ದರು. ಅಲ್ಲದೆ ಪ್ರಸ್ತುತ ಯುವ ಸಮೂಹ ಪ್ರಿಯಾ ವಾರಿಯರ್​​ ಕಂಡ್ರೆ ಸೆಲ್ಫಿಗೆ ಮುಗಿ ಬೀಳುತ್ತದೆ. ಇಂತಹ ಯುವ ಸಮೂಹ ಮತ್ತು ಪ್ರಿಯಾ ವಾರಿಯರ್​​ ಬಗ್ಗೆ ತಮ್ಮ ಫೇಸ್​​ ಬುಕ್​ ಪುಟದಲ್ಲಿ ಜಗ್ಗೇಶ್​ ಬರೆದುಕೊಂಡಿದ್ದಾರೆ.

ಇಂದು ಬಲವಂತಕ್ಕೆ ಗೌರವಿಸಿ ಕಾರ್ಯಕ್ರಮಕ್ಕೆ ಹೋಗಿ ಮೌನಕ್ಕೆ ಶರಣಾಗಿ ಮೂಕವಿಸ್ಮಿತನಾದೆ. ರಾಜ್ಯ, ರಾಷ್ಟ್ರಕ್ಕೆ ಯಾವ ಕೊಡುಗೆ ಇಲ್ಲಾ.
ಬರಹಗಾರ್ತಿಯಲ್ಲಾ. ಸ್ವಂತಂತ್ರ ಹೋರಾಟಗಾರ್ತಿಯಂತು ಅಲ್ಲವೇ ಅಲ್ಲಾ. ಹೋಗಲಿ ನೂರು ಸಿನಿಮಾ ನಟಿಯಂತು ಅಲ್ಲಾ. ಸಾಹಿತಿ ಅಲ್ಲಾ. ಅನಾಥ ಮಕ್ಕಳಿಗೆ ಮಹಾ ತಾಯಿ ಅಲ್ಲಾ. ಆಧುನಿಕ ಮದರ್ ತೆರೆಸಾ ಅಲ್ಲಾ. ನೂರಾರು ಮರ ನೆಟ್ಟ ಸಾಲು ಮರದ ತಿಮ್ಮಕ್ಕ ಅಲ್ಲಾ.

ಕಾದಂಬರಿ ಬರೆದ ತ್ರಿವೇಣಿ ಅಲ್ಲಾ. ಜಾನ್ಸಿ ಅಲ್ಲಾ. ಅಬ್ಬಕ್ಕನಲ್ಲಾ. ಕಿತ್ತೂರು ಚನ್ನಮ್ಮನಲ್ಲಾ. ಮತ್ತೆ ಯಾರು ಅಂಥ ಯೋಚಿಸಿದರೆ ಬೇರ್ಯಾರು ಅಲ್ಲಾ. ಕಣ್ಣು ಹೊಡೆದು ಕಣ್ಣಲ್ಲಿ ಯುವಕನಿಗೆ ಪ್ರೀತಿ ತೋರ್ಪಡಿಸುವ ಸಾಮಾನ್ಯ ವೀಡಿಯೋ ಮಾಡಿ ಜಗ ಮೆಚ್ಚಿದ ಸಾಮಾನ್ಯ ಹೆಣ್ಣು ಮಗು. ಆಕೆ ಹೆಸರು ವಾರಿಯರ್ ಕೇರಳದ ಮಗು. ಕರೆದು ತಂದದ್ದು ಕನ್ನಡ ನಿರ್ಮಾಪಕ ಸ್ನೇಹಿತ ಮಂಜು. ಅದು ಒಕ್ಕಲಿಗರಿಗೆ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವಕ್ಕೆ.

ನೂರು ಸಿನಿಮಾ ನಿರ್ದೇಶಕ ಸಾಯಿಪ್ರಕಾಶ್, ವಿದ್ಯಾದಾನಿ ಶ್ರೀ ನಿರ್ಮಲಾನಂದ ಶ್ರೀಗಳಿಗಿಂತ ಕಣ್ಣು ಹೊಡೆವ ವೀಡಿಯೋ ನಟಿ ಇಂದು ದೇವರಂತೆ ಕಂಡಳು ಯುವಸಮಾಜಕ್ಕೆ. ಎಂಥ ಶಿಕ್ಷೆ ಎಂದು ಬರೆದುಕೊಂಡಿದ್ದಾರೆ.

Last Updated : Nov 14, 2019, 12:34 PM IST

For All Latest Updates

ABOUT THE AUTHOR

...view details