ಕೊರೊನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ ನಟಿ ಕಾವ್ಯಶಾಸ್ತ್ರಿ ಇದೀಗ ಕ್ಯಾನ್ಸರ್ ರೋಗಿಗಳಿಗಾಗಿ ತಮ್ಮ ಕೂದಲನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಕೂದಲು ದಾನ ಮಾಡುತ್ತಿರುವುದಕ್ಕೆ ಕಾರಣ ನೀಡಿರುವ ಅವರು, "ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್ನಿಂದಾಗಿ ನಾನು ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೆ.
ಆ ನೋವನ್ನು ಹತ್ತಿರದಿಂದ ಕಂಡಿದ್ದೇನೆ. ಹೀಗಾಗಿ, ಈ ನಿರ್ಧಾರಕ್ಕೆ ಬಂದಿದ್ದೇನೆ. ಕೂದಲು ದಾನ ಸಣ್ಣ ಕೆಲಸವೇ ಇರಬಹುದು. ಆದರೆ, ಒಳ್ಳೇ ಕೆಲಸಕ್ಕೆ ನೀವು ಸಹ ಕೈಜೋಡಿಸಿ" ಎಂದು ನಟಿ ಮನವಿ ಮಾಡಿದ್ದಾರೆ.