ಕರ್ನಾಟಕ

karnataka

ETV Bharat / sitara

ಅಭಿಮಾನಿಗಳಿಗೆ ಇಲ್ಲಿ 'ಕಿಚ್ಚ'ನೇ ದೇವರು.. ಸುದೀಪ್​ಗೆ ಗುಡಿ ನಿರ್ಮಿಸುತ್ತಿರುವ ರಾಯಚೂರು ಫ್ಯಾನ್ಸ್​ - ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕುರಕೂಂದ ಗ್ರಾಮದಲ್ಲಿ ಸುದೀಪ್ ದೇಗುಲ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕುರಕೂಂದ ಗ್ರಾಮದಲ್ಲಿ ಸುದೀಪ್ ಅಭಿಮಾನಿಗಳು ದೇವಾಲಯ ನಿರ್ಮಿಸುತ್ತಿದ್ದು, ಈಗಾಗಲೇ ನಾಲ್ಕೂವರೆ ಅಡಿ ಎತ್ತರದ ಪುತ್ಥಳಿ ತಯಾರಾಗಿದೆ. ದೇವಾಲಯ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

kiccha-sudeep-fans-building-a-temple-for-him-in-raichur-district
ನಟ ಕಿಚ್ಚ ಸುದೀಪ್​ ದೇವಾಲಯ ನಿರ್ಮಾಣಕ್ಕೆ ಮುಂದಾದ ಅಭಿಮಾನಿಗಳು

By

Published : Nov 30, 2021, 5:57 PM IST

Updated : Nov 30, 2021, 7:15 PM IST

ರಾಯಚೂರು: ಚಲನಚಿತ್ರ ನಟರನ್ನು ಆರಾಧಿಸಿ ಅವರ ಹೆಸರಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಶ್ರೇಯೋಭಿವೃದ್ಧಿ ಪ್ರಾರ್ಥಿಸುವುದು ಅಭಿಮಾನಿಗಳು ನಡೆಸಿಕೊಂಡು ಬಂದಿರುವ ಕಾರ್ಯವಾಗಿದೆ. ಆದರೆ ರಾಯಚೂರಲ್ಲಿ ತಮ್ಮ ನೆಚ್ಚಿನ ನಟನ ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳು ಮುಂದಾಗಿದ್ದಾರೆ.

ನಟ ಕಿಚ್ಚ ಸುದೀಪ್ ಪುತ್ಥಳಿ

Temple for kiccha sudeep: ಕನ್ನಡ ಸೇರಿ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ಥಳಿ ಕೆತ್ತಿಸಿರುವ ಅಭಿಮಾನಿಗಳು ಅವರಿಗಾಗಿ ದೇವಾಲಯ ನಿರ್ಮಾಣ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಮೊದಲು ಮಾನವನಾಗು ಎಂಬ ಸಂಘಟನೆ ಹುಟ್ಟುಹಾಕಿ ಆ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅದರಂತೆ ಅವರ ಅಭಿಮಾನಿಗಳು ಸಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ನಿರ್ಮಾಣ ಹಂತದಲ್ಲಿರುವ ನಟ ಕಿಚ್ಚ ಸುದೀಪ್​ ದೇವಾಲಯ

ಈಗ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕುರಕೂಂದ ಗ್ರಾಮದಲ್ಲಿ ಸುದೀಪ್ ಅಭಿಮಾನಿಗಳು ದೇವಾಲಯ ನಿರ್ಮಿಸುತ್ತಿದ್ದು, ಈಗಾಗಲೇ ನಾಲ್ಕೂವರೆ ಅಡಿ ಎತ್ತರದ ಪುತ್ಥಳಿ ತಯಾರಾಗಿದ್ದು, ದೇವಾಲಯ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಬಾಕಿ ಉಳಿದ ಕಾಮಗಾರಿಯನ್ನ ಈ ವರ್ಷದೊಳಗೆ ಮುಗಿಸಿ ನಟ ಸುದೀಪ್ ಅವರ ಕೈಯಿಂದಲೇ ಉದ್ಘಾಟನೆ ಮಾಡಿಸುವ ಮಹದಾಸೆ ಹೊಂದಿದ್ದಾರೆ.

ದೇವಾಲಯ ನಿರ್ಮಾಣಕ್ಕಾಗಿ ಶರಣಬಸವ ಎನ್ನುವರು ಅಂದಾಜು 35x40 ಅಡಿಯಷ್ಟು ಭೂಮಿಯನ್ನು ಉಚಿತವಾಗಿ ನೀಡಿದ್ದಾರೆ. ಜೊತೆಗೆ ಗ್ರಾಮಸ್ಥರೇ ಹಣ ಒಟ್ಟುಗೂಡಿಸಿ ದೇವಾಲಯ ನಿರ್ಮಾಣ ಕಾರ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ:ಕಾರವಾರ ಯುವಕನ ಮೋಡಿ..'ಶೈನ್ ಲೈಕ್ ಎ ರೇನ್ಬೋ' ರ‍್ಯಾಪ್ ಸಾಂಗ್​ಗೆ ಎಲ್ಲರೂ ಫಿದಾ

Last Updated : Nov 30, 2021, 7:15 PM IST

ABOUT THE AUTHOR

...view details