ರಾಯಚೂರು: ಚಲನಚಿತ್ರ ನಟರನ್ನು ಆರಾಧಿಸಿ ಅವರ ಹೆಸರಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಶ್ರೇಯೋಭಿವೃದ್ಧಿ ಪ್ರಾರ್ಥಿಸುವುದು ಅಭಿಮಾನಿಗಳು ನಡೆಸಿಕೊಂಡು ಬಂದಿರುವ ಕಾರ್ಯವಾಗಿದೆ. ಆದರೆ ರಾಯಚೂರಲ್ಲಿ ತಮ್ಮ ನೆಚ್ಚಿನ ನಟನ ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳು ಮುಂದಾಗಿದ್ದಾರೆ.
Temple for kiccha sudeep: ಕನ್ನಡ ಸೇರಿ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ಥಳಿ ಕೆತ್ತಿಸಿರುವ ಅಭಿಮಾನಿಗಳು ಅವರಿಗಾಗಿ ದೇವಾಲಯ ನಿರ್ಮಾಣ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಮೊದಲು ಮಾನವನಾಗು ಎಂಬ ಸಂಘಟನೆ ಹುಟ್ಟುಹಾಕಿ ಆ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅದರಂತೆ ಅವರ ಅಭಿಮಾನಿಗಳು ಸಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.