ಮಾಸ್ ಲುಕ್ನಿಂದಲೇ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ನಟ ರಾಜವರ್ಧನ್. 'ಬಿಚ್ಚುಗತ್ತಿ' ಸಿನಿಮಾ ಮೂಲಕ ,ಕತ್ತಿವರಸೆ, ಕುದುರೆ ಸವಾರಿ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದ ಮಾಸ್ಸಿವ್ ಸ್ಟಾರ್ ರಾಜವರ್ಧನ್ ಈಗ ಕಾಲಿವುಡ್ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ.
ತಮಿಳು ಚಿತ್ರರಂಗಕ್ಕೂ ಕಾಲಿಟ್ಟ ಮಾಸ್ಸಿವ್ ಸ್ಟಾರ್ ರಾಜವರ್ಧನ್
'ಫ್ಲೈ' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟ ಖ್ಯಾತ ಹಾಸ್ಯ, ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಇದೀಗ ಕನ್ನಡ-ತಮಿಳು ಭಾಷೆಗಳಲ್ಲಿ ತಯಾರಾಗುತ್ತಿರುವ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರವನ್ನು ಕುಮಾರೇಶ್ ನಿರ್ದೇಶಿಸುತ್ತಿದ್ದು ಇಂದು ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಇನ್ನೂ ಹೆಸರಿಡದ ಪ್ರೊಡಕ್ಷನ್ ನಂಬರ್ 1 ಹೆಸರಿನಲ್ಲಿ ರಾಜವರ್ಧನ್ ನಟಿಸುತ್ತಿರುವ ತಮಿಳು ಸಿನಿಮಾವೊಂದು ಅನೌನ್ಸ್ ಆಗಿದೆ. ಕೈಯಲ್ಲಿ ಲಾಂಗ್ ಹಿಡಿದು ರಾಜವರ್ಧನ್ ಬ್ಯಾಕ್ ಪೋಸ್ ಕೊಟ್ಟಿರುವ ಪೋಸ್ಟರನ್ನು ಚಿತ್ರತಂಡ ಅನಾವರಣ ಮಾಡಿದೆ. ಕುಮಾರೇಶ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಹಾಗೂ ತಮಿಳು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು ಈ ಮೂಲಕ ರಾಜವರ್ಧನ್ ತಮಿಳು ಸಿನಿಮಾ ಇಂಡಸ್ಟ್ರಿಗೆ ಪರಿಚಯವಾಗುತ್ತಿದ್ದಾರೆ.
ರಾಜವರ್ಧನ್ ನಟಿಸುತ್ತಿರುವ ಇದು ನೈಜ ಘಟನೆ ಆಧಾರಿತ ಸಿನಿಮಾ ಎನ್ನಲಾಗಿದೆ. ಚಿತ್ರಕ್ಕೆ ಎಸ್.ಕೆ. ರಾವ್ ಕ್ಯಾಮರಾ ಕೈ ಚಳಕವಿದ್ದು, ರೆಡ್ ಡೈಮಂಡ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. 'ಬಿಚ್ಚುಗತ್ತಿ' ಸಿನಿಮಾ ನಂತರ ರಾಜವರ್ಧನ್ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಈಗ ಉತ್ತರ ದೊರೆತಿದೆ. ಚಿತ್ರದ ನಾಯಕಿ, ತಾಂತ್ರಿಕ ವರ್ಗ ಹಾಗೂ ಉಳಿದ ತಾರಾ ಬಳಗದ ಬಗ್ಗೆ ಶೀಘ್ರವೇ ಮಾಹಿತಿ ಹೊರ ಬೀಳಲಿದೆ.