ಕರ್ನಾಟಕ

karnataka

By

Published : Jan 18, 2021, 12:31 PM IST

ETV Bharat / sitara

ತಮ್ಮ ಹೊಸ ಚಿತ್ರಕ್ಕೆ ತಾವೇ ಬಂಡವಾಳ ಹಾಕುತ್ತಿರುವ ರಾಜವರ್ಧನ್​

'ಬಿಚ್ಚುಗತ್ತಿ' ಚಿತ್ರದ ಮೂಲಕ ಗಮನ ಸೆಳೆದ ನಟ ರಾಜವರ್ಧನ್ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದು ಈ ಚಿತ್ರವನ್ನು ಅವರೇ ನಿರ್ಮಾಣ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಹೊಸ ಚಿತ್ರವನ್ನು ಕುಮರೇಶ್​​​ ನಿರ್ದೇಶಿಸುತ್ತಿದ್ದು ಹರಿಸಂತೋಷ್ ಕಥೆ, ಚಿತ್ರಕಥೆ ರಚಿಸಿದ್ದಾರೆ.

Rajavardhan
ರಾಜವರ್ಧನ್​​​​​​​​​​​​​

ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಸ್ಫುರದ್ರೂಪಿ ನಟ, ಒಳ್ಳೆ ಹೈಟು ಕೂಡಾ ಇದ್ದಾರೆ. ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 4-5 ವರ್ಷಗಳೇ ಆಗಿವೆ. ಆದರೆ ರಾಜವರ್ಧನ್ ಇನ್ನೂ ಬ್ರೇಕ್​​​​ಗಾಗಿ ಕಾಯುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ 'ಬಿಚ್ಚುಗತ್ತಿ' ಚಿತ್ರದ ಬಗ್ಗೆ ನಿರೀಕ್ಷೆಗಳಿದ್ದರೂ ಚಿತ್ರ ಅಂದುಕೊಂಡಷ್ಟು ಯಶಸ್ಸು ಸಾಧಿಸಲಿಲ್ಲ.

ಈ ಮಧ್ಯೆ, ರಾಜವರ್ಧನ್ ಒಂದೆರೆಡು ಚಿತ್ರಗಳಲ್ಲಿ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಮಾಹಿತಿಗಳ ಪ್ರಕಾರ ರಾಜವರ್ಧನ್​​​​​​ ತಮ್ಮ ಹೊಸ ಚಿತ್ರಕ್ಕೆ ತಾವೇ ಬಂಡವಾಳ ಹೂಡುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ, ರೆಡ್ ಡೈಮಂಡ್ ಪ್ರೊಡಕ್ಷನ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಅವರು ಹುಟ್ಟುಹಾಕಿದ್ದಾರೆ ಎಂಬ ಸುದ್ದಿ ಬಂದಿತ್ತು. ಇದೀಗ ಆ ಸಂಸ್ಥೆಯಡಿ ಅವರು 'ಚಕ್ರಿ' ಎಂಬ ಚಿತ್ರವನ್ನು ಘೋಷಿಸಿದ್ದಾರೆ. ಸದ್ಯ ಪ್ರೀಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಮಾರ್ಚ್ ಕೊನೆಯ ವೇಳೆಗೆ ಆರಂಭವಾಗುವ ಸಾಧ್ಯತೆ ಇದೆ.

ಈ ಹಿಂದೆ ರಾಜವರ್ಧನ್ ಅಭಿನಯದ 'ನೂರೊಂದು ನೆನಪು' ಚಿತ್ರವನ್ನು ನಿರ್ದೇಶಿಸಿದ್ದ ಕುಮರೇಶ್, ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹರಿಸಂತೋಷ್ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ರಚಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ನಡೆದ ದೊಡ್ಡ ಹಗರಣವೊಂದನ್ನು ಆಧರಿಸಿ ಈ ಚಿತ್ರ ಮಾಡಲಾಗುತ್ತಿದೆಯಂತೆ. ಆ ಹಗರಣ ಏನು ಎಂಬುದನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ. ಈ ಹಗರಣದ ಸುತ್ತ ಇಡೀ ಕಥೆ ಸುತ್ತಲಿದ್ದು, ಅದೇ ಚಿತ್ರದ ಹೈಲೈಟ್ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ಸಂಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details