ಕರ್ನಾಟಕ

karnataka

ನೀವಿಲ್ಲದ ನಿಜವನ್ನು ಈಗಲೂ ನಂಬೋಕೆ ಆಗ್ತಿಲ್ಲ: ರಜಿನಿಕಾಂತ್‌ ಕಂಬನಿ

By

Published : Nov 10, 2021, 5:01 PM IST

Updated : Nov 10, 2021, 6:59 PM IST

ಅಪ್ಪು ಇಲ್ಲ ಎಂಬ ಸತ್ಯವನ್ನು ಈಗಲೂ ನಂಬಲಾಗುತ್ತಿಲ್ಲ ಎಂದು ರಜಿನಿಕಾಂತ್‌ (Rajinikanth) ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

rajinikanth remembers puneeth rajkumar fans slam him as he pays homage through daughters app
ಪುನೀತ್‌ ರಾಜ್‌ಕುಮಾರ್‌ಗೆ ರಜನಿಕಾಂತ್‌ ಟ್ವೀಟ್‌ ಮೂಲಕ ಶ್ರದ್ಧಾಂಜಲಿ; ನೆಟ್ಟಿಗರು ಫುಲ್‌ ಗರಂ

ಹೈದರಾಬಾದ್‌:ಸೂಪರ್‌ಸ್ಟಾರ್ ರಜಿನಿಕಾಂತ್ (Rajinikanth) ಪುನೀತ್ (Powerstar Puneeth Rajkumar) ಅವರನ್ನು ನೆನೆದು ಭಾವುಕರಾಗಿದ್ದಾರೆ. ಅಪ್ಪು ಇಲ್ಲ ಎಂಬ ವಿಚಾರವನ್ನು ಇಂದಿಗೂ ಅರಗಿಸಿಕೊಳ್ಳಲಾಗುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್‌ 29 ರಂದು ನಟ ಪುನೀತ್‌ ರಾಜ್‌ಕುಮಾರ್‌ ಹೃದಯಸ್ತಂಭನದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ಅಂದಿನಿಂದ ಬಾಲಿವುಡ್‌, ಟಾಲಿವುಡ್‌, ಕಾಲಿವುಡ್‌ನ ಹಿರಿಯ, ಕಿರಿಯ ನಟ-ನಟಿಯರು, ರಾಜಕಾರಣಿಗಳು, ಸ್ವಾಮೀಜಿಗಳು ಅಪ್ಪು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ. ಅನೇಕ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್‌ ಸಮಾಧಿ ಸ್ಥಳಕ್ಕೂ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

Last Updated : Nov 10, 2021, 6:59 PM IST

ABOUT THE AUTHOR

...view details