ಉಡುಪಿ : ಸಿಂಪಲ್ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಕುಟುಂಬದ ಜೊತೆ ಷಷ್ಠಿ ಕಾರ್ಯಕ್ರಮದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದ ದೊಡ್ಡಮನೆ ರಕ್ಷಿತ್ ಶೆಟ್ಟಿಯ ಮೂಲ ಮನೆ. ಷಷ್ಠಿ ಹಿನ್ನೆಲೆಯಲ್ಲಿ ಪ್ರತೀ ವರ್ಷವೂ ರಕ್ಷಿತ್ ಕುಟುಂಬದಲ್ಲಿ ನಾಗ ದೇವರಿಗೆ ವಿಶೇಷ ಪೂಜೆಯನ್ನು ಮಾಡುತ್ತಾರೆ.
ಇಂದು ನಡೆದ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದರು. ನಾಗ ಬನ ಸಮೀಪ ಷಷ್ಠಿಯ ವಿಶೇಷ ಭೋಜನ ಮಾಡುವ ಸಂಪ್ರದಾಯ ಇದ್ದು, ನಟ ರಕ್ಷಿತ್ ಶೆಟ್ಟಿ ಕೂಡ ಭೋಜನ ಸವಿದಿದ್ದಾರೆ.
ಸದ್ಯ ಚಾರ್ಲಿ 777 ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಬಾಕಿ ಇದ್ದು, ಬ್ಯುಸಿ ಶೆಡ್ಯೂಲ್ ನಡುವೆಯೂ ರಕ್ಷಿತ್ ಶೆಟ್ಟಿ ಕುಟುಂಬದ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಅಭಿಮಾನಿಗಳು ಅವರ ಫೇಮಸ್ ಡೈಲಾಗ್ 'ಬೋಡ ಶೀರ' ಬೋರ್ಡ್ ಹಿಡಿದು ನಟನ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.