‘ಶುಗರ್ ಫ್ಯಾಕ್ಟರಿ’, ‘ಲವ್ ಮಿ ಆರ್ ಹೇಟ್ ಮಿ’, ಲವ್ ಮಾಕ್ಟೈಲ್-2 ಸೇರಿ ಹೀಗೆ ಬ್ಯಾಕ್ ಟೂ ಬ್ಯಾಕ್ ಚಿತ್ರಗಳನ್ನ ಮಾಡುತ್ತಿದ್ದಾರೆ. ಇದರ ಜೊತೆಗೆ ಡಾರ್ಲಿಂಗ್ ಕೃಷ್ಣ ‘ದಿಲ್ ಪಸಂದ್’ ಎಂಬ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಚಿತ್ರದ ಟೈಟಲ್ ಅನ್ನ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅನಾವರಣ ಮಾಡಿದ್ದಾರೆ.
ಬಳಿಕ ಮಾತನಾಡಿದ ರವಿ ಡಿ ಚನ್ನಣ್ಣನವರ್, ನನ್ನ 13 ವರ್ಷದ ವೃತ್ತಿ ಜೀವನದಲ್ಲಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಆದರೆ, ನಾನು ಭಾಗವಹಿಸಿರುವ ಮೊದಲ ಚಲನಚಿತ್ರ ಸಮಾರಂಭವಿದು. ಅದಕ್ಕೆ ಕಾರಣ ನನ್ನ ಸುಮಂತ್ ಕ್ರಾಂತಿ ಅವರ ಗೆಳೆತನ ಎಂದರು.
ನಾನು ಅಪ್ಟಟ್ಟ ಕನ್ನಡಾಭಿಮಾನಿ. ‘ವಿಆರ್ ಜೋಕರ್ಸ್’ ಎಂಬ ನಾಟಕವನ್ನು ಬರೆದು, ನಿರ್ದೇಶನ ಮಾಡಿ, ಅಭಿನಯಿಸಿದ್ದೆ. ಅದು ಈಗಲೂ ಯೂಟ್ಯೂಬ್ನಲ್ಲಿ ಲಭ್ಯವಿದೆ. ಅದಕ್ಕೆ ಕೆಲವು ಪ್ರಶಸ್ತಿಗಳು ಬಂದಿವೆ. ನನಗೆ ಬರವಣಿಗೆ ಇಷ್ಟ. ಪಿಯುಸಿಯಲ್ಲಿದ್ದಾಗ ಗದಗ್ನಲ್ಲಿ ಬ್ಲಾಕ್ ಟಿಕೆಟ್ ಮಾರಿದ್ದೆ ಎಂದರು.
ಬಳಿಕ ಮಾತನಾಡಿದ ನಿರ್ದೇಶಕ ಶಿವತೇಜಸ್, ಇದು ಲಾಕ್ಡೌನ್ ಸಮಯದಲ್ಲಿ ಹುಟ್ಟಿದ ಕಥೆ. ಈ ಕಥೆ ಸಿದ್ದವಾದ ಕೂಡಲೇ ನಾಯಕ ಕೃಷ್ಣ ಅವರಿಗೆ ಹೇಳಿದೆ. ಈ ಸಂದರ್ಭಕ್ಕೆ ಸೂಕ್ತವಾದ ಕಥೆ, ಮುಂದುವರೆಯಿರಿ ಎಂದು ನನಗೆ ಹೇಳಿದ್ದರು. ಬಳಿಕ ಕಥೆ ಸಂಪೂರ್ಣವಾಯಿತು ಎಂದರು.