'ದಾರಿ ಯಾವುದಯ್ಯಾ ವೈಕುಂಠಕೆ' ಇದು ಪುರಂದರದಾಸರು ಹಾಡಿದ ಸಾಲುಗಳು. ಇದೀಗ ಈ ಹೆಸರಲ್ಲಿ ಸಿನಿಮಾವೊಂದು ತಯಾರಾಗುತ್ತಿದೆ. ಖ್ಯಾತ ನಿರ್ದೇಶಕ, ನಟ ರಿಷಭ್ ಶೆಟ್ಟಿ ಈ ಸಿನಿಮಾದ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
'ದಾರಿ ಯಾವುದಯ್ಯಾ ವೈಕುಂಠಕೆ' ಶೀರ್ಷಿಕೆ ಅನಾವರಣ ಮಾಡಿದ ರಿಷಭ್ ಶೆಟ್ಟಿ
ಸಾಕಷ್ಟು ಸಿನಿಮಾಗಳಲ್ಲಿ ಖಳನಟ ಆಗಿ 'ಹಫ್ತಾ' ಚಿತ್ರದ ಮೂಲಕ ನಾಯಕನಾದ ವರ್ಧನ್ ತೀರ್ಥಹಳ್ಳಿ 'ದಾರಿ ಯಾವುದಯ್ಯಾ ವೈಕುಂಠಕೆ' ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಖ್ಯಾತ ನಿರ್ದೇಶಕ, ನಟ ರಿಷಭ್ ಶೆಟ್ಟಿ ಈ ಸಿನಿಮಾದ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಶ್ರೀ ಬಸವೇಶ್ವರ ಕ್ರಿಯೇಷನ್ ಬ್ಯಾನರ್ ಅಡಿ ಶರಣಪ್ಪ ಎಂ. ಕೋಟಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ. 30 ದಿನಗಳಲ್ಲಿ ಬೆಂಗಳೂರು, ರಾಮನಗರ, ಮಂಡ್ಯ ಸುತ್ತ ಮುತ್ತ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗುವುದು ಎಂದು ಚಿತ್ರತಂಡ ಮಾಹಿತಿ ನೀಡಿದೆ. 'ಕೃಷ್ಣ ಗಾರ್ಮೆಂಟ್ಸ್' ಚಿತ್ರವನ್ನು ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಕೂಡಾ ಮಾಡುತ್ತಿದ್ದಾರೆ. ಯಾವುದೇ ಕೆಲಸ ಇಲ್ಲದೆ, ಉಂಡಾಡಿ ಗುಂಡನಂತೆ ತಿರುಗುವ ಯುವಕನೊಬ್ಬ ಆಕಸ್ಮಿಕವಾಗಿ ಸ್ಮಶಾನಕ್ಕೆ ಭೇಟಿ ನೀಡುತ್ತಾನೆ. ಅಲ್ಲಿಗೆ ಹೋಗಿಬಂದ ಮೇಲೆ ಅವರ ಜೀವನದಲ್ಲಿ ಬದಲಾವಣೆ ಆರಂಭವಾಗುತ್ತದೆ. ಇದು ಈ ಚಿತ್ರದ ಕಥೆ.
ಸಾಕಷ್ಟು ಸಿನಿಮಾಗಳಲ್ಲಿ ಖಳನಟ ಆಗಿ 'ಹಫ್ತಾ' ಚಿತ್ರದ ಮೂಲಕ ನಾಯಕನಾದ ವರ್ಧನ್ ತೀರ್ಥಹಳ್ಳಿ 'ದಾರಿ ಯಾವುದಯ್ಯಾ ವೈಕುಂಠಕೆ' ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. 'ತಿಥಿ' ಖ್ಯಾತಿಯ ಪೂಜಾ ಈ ಚಿತ್ರದ ನಾಯಕಿ. ಉಳಿದಂತೆ ಬಲರಾಜವಾಡಿ, ಶೀಬಾ, ಅರುಣ್ ಮೂರ್ತಿ, ಸ್ಪಂದನ, ಪ್ರಶಾಂತ್ ರಾವ್ ಹಾಗೂ ಇತರರು ತಾರಾಗಣದಲ್ಲಿದ್ದಾರೆ. ನಿತಿನ್ ಛಾಯಾಗ್ರಹಣ ಹಾಗೂ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ.