ಕರ್ನಾಟಕ

karnataka

ETV Bharat / sitara

ನಂದಕಿಶೋರ್ ನಿರ್ದೇಶನದ ಚಿತ್ರಕ್ಕೆ ಶ್ರೇಯಸ್ ನಾಯಕ

ಸ್ಯಾಂಡಲ್​ವುಡ್​ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಿರ್ದೇಶಕ ನಂದ ಕಿಶೋರ್​ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರ ಹುಟ್ಟುಹಬ್ಬದಂದು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

By

Published : Apr 6, 2021, 11:40 AM IST

Shreyas next cenema announced with director Nandkishore
ನಂದ ಕಿಶೋರ್​ ಸಿನಿಮಾಗೆ ಶ್ರೇಯಸ್​ ನಾಯಕ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್​ ಅವರು ಅಧ್ಯಕ್ಷ, ರನ್ನ, ಪೊಗರು ನಂತಹ ಯಶಸ್ವಿ ಚಿತ್ರಗಳ ನಿರ್ದೇಶಕ ನಂದ ಕಿಶೋರ್ ಜೊತೆ ಸಿನಿಮಾ ಮಾಡ್ತಾರೆ ಎನ್ನಲಾಗಿತ್ತು. ಈಗ ಅಧಿಕೃತವಾಗಿ ನಿರ್ದೇಶಕ ನಂದಕಿಶೋರ್ ನಿರ್ದೇಶನದಲ್ಲಿ, ಪಡ್ಡೆಹುಲಿ ಶ್ರೇಯಸ್ ಅಭಿನಯಿಸೋದು ಪಕ್ಕಾ ಆಗಿದೆ.

ನಂದಕಿಶೋರ್ ನಿರ್ದೇಶನದ ಚಿತ್ರದಲ್ಲಿ ಶ್ರೇಯಸ್

ಶ್ರೇಯಸ್​ ಹುಟ್ಟುಹಬ್ಬದ ಪ್ರಯುಕ್ತ ಈ ಹೊಸ ಸಿನಿಮಾ ಅನೌನ್ಸ್ ಆಗಿದೆ. ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು ಈ ಹಿಂದೆ ಕೆ.ಪಿ.ಶ್ರೀಕಾಂತ್ ನಿರ್ಮಾಣದ 'ಟಗರು' ಚಿತ್ರದಲ್ಲಿ ‌ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ಇದು ಅವರು ತಮ್ಮ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ.

ನಂದ ಕಿಶೋರ್​ ಸಿನಿಮಾಗೆ ಶ್ರೇಯಸ್​ ನಾಯಕ

ಪ್ರೊಡಕ್ಷನ್ ನಂ 1 ಹೆಸರಿನಲ್ಲಿ ಚಿತ್ರದ ಚಟುವಟಿಕೆಗಳು ಆರಂಭವಾಗಿದ್ದು, ಸದ್ಯದಲ್ಲೇ ಶೀರ್ಷಿಕೆ ಅನಾವರಣಗೊಳಿಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಯುಗಾದಿ ಹಬ್ಬ ಕಳೆದ ತಕ್ಷಣ ಈ ಚಿತ್ರದ ಮುಹೂರ್ತ ನೆರವೇರಲಿದೆ. ಧರ್ಮವಿಶ್ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ಮಾಪಕರು ಹೇಳಿದ್ದಾರೆ. ಈ ಚಿತ್ರದ ನಾಯಕಿ ಯಾರು? ಯಾರೆಲ್ಲ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಅನ್ನೋದು ಸದ್ಯದಲ್ಲೇ ಗೊತ್ತಾಗಲಿದೆ.

ABOUT THE AUTHOR

...view details