ಕೊರೊನಾದಿಂದಾಗಿ ಇಡೀ ಕನ್ನಡ ಚಿತ್ರರಂಗ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಸಿನಿಮಾವನ್ನೇ ನಂಬಿಕೊಂಡಿದ್ದ, ಸಾವಿರಾರು ಸಿನಿಮಾ ಕಾರ್ಮಿಕರು, ತಂತ್ರಜ್ಞಾನರು, ಹಿರಿಯ ಪೋಷಕ ಕಲಾವಿದರು ಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಯದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮೂರು ಸಾವಿರ ಸಿನಿಮಾ ಕಾರ್ಮಿಕರಿಗೆ ಆಹಾರದ ಕಿಟ್ಗಳನ್ನ ಕೊಡುವ ಮೂಲಕ ತಮ್ಮ ಕೈಲಾದ ಸಹಾಯವನ್ನ ಮಾಡಿದ್ದಾರೆ.
ಉಪೇಂದ್ರ ಈ ಕೆಲಸ ನೋಡಿದ ಸಾಕಷ್ಟು ಸಿನಿಮಾ ತಾರೆಯರು ಕೂಡ, ಉಪ್ಪಿ ಜೊತೆ ಕೈ ಜೋಡಿಸಿ ಕಷ್ಟದಲ್ಲಿರುವ ಕಾರ್ಮಿಕರಿಗೆ, ಪೋಷಕ ಕಲಾವಿದರಿಗೆ, ಸಹ ಕಲಾವಿದರಿಗೆ ಆಹಾರದ ಕಿಟ್ ಗಳನ್ನ ಕೊಡುವ ಕೆಲಸ ಮಾಡುತ್ತಿದ್ದಾರೆ. ಉಪ್ಪಿಯ ಈ ಸೇವೆ ನೋಡಿ ನೂರಾರು ದಾನಿಗಳು ಕೂಡ ಉಪೇಂದ್ರ ಕೆಲಸಕ್ಕೆ ಸಾಥ್ ನೀಡಿದ್ದಾರೆ. ಇದರ ಜೊತೆಗೆ ರೈತರು ಬೆಳದ ತರಕಾರಿಗಳನ್ನ, ಸರಿಯಾದ ಬೆಲೆಗೆ ಖರೀದಿಸಿ ಈ ತರಕಾರಿಗಳನ್ನ ಕಷ್ಟದಲ್ಲಿ ಇರುವವರಿಗೆ ಉಪೇಂದ್ರ ಹಂಚುವ ಕೆಲಸ ಮಾಡುವ ಮೂಲಕ ಸಮಾಜ ಸೇವೆ ಮಾಡ್ತಾ ಇದ್ದಾರೆ.