ನವದೆಹಲಿ: ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್-19 ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಬಿಜೆಪಿ ಮುಖಂಡರ ದೂರಿನ ಅನ್ವಯ ನಟಿ ಆಯಿಷಾ ಸುಲ್ತಾನ್ ವಿರುದ್ಧ ಲಕ್ಷದ್ವೀಪ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿಯ ಲಕ್ಷದ್ವೀಪ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್, ಲಕ್ಷದ್ವೀಪದ ಚೆತಿಯಾತ್ ದ್ವೀಪ ನಿವಾಸಿ ಆಯೆಷಾ ಸುಲ್ತಾನಾ ವಿರುದ್ಧ ದೂರು ದಾಖಲಿಸಿದ್ದಾರೆ ಕವರತ್ತಿ ಪೊಲೀಸರು ದಾಖಲಿಸಿರುವ ಎಫ್ಐಆರ್ ಅನ್ವಯ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ನಿರ್ಮಾಪಕಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಲಯಾಳಂ ಟಿ.ವಿ ಚಾನೆಲ್ನಲ್ಲಿ ನಡೆದ ಚರ್ಚೆಯ ವೇಳೆ ಲಕ್ಷದ್ವೀಪದಲ್ಲಿ ಕೋವಿಡ್-19 ಹರಡಲು ಕೇಂದ್ರ ಸರ್ಕಾರವು ಜೈವಿಕ ಅಸ್ತ್ರಗಳನ್ನು ಬಳಸಿದೆ ಎಂದು ಆಯಿಷಾ ಆರೋಪಿಸಿದ್ದರು ಎನ್ನಲಾಗಿದೆ. ಆಯೆಷಾ ಸುಲ್ತಾನಾ ದೇಶ ವಿರೋಧಿ ಕೃತ್ಯ ಎಸಗಿದ್ದಾರೆಂದು ಬಿಜೆಪಿ ಮುಖಂಡರ ದೂರಿನಲ್ಲಿ ಆರೋಪಿಸಲಾಗಿದ್ದು, ಇದು ಕೇಂದ್ರ ಸರ್ಕಾರಕ್ಕೆ ಕಳಂಕ ತಂದಿದೆ ಎಂದು ದೂರಿದ್ದಾರೆ.