ಕರ್ನಾಟಕ

karnataka

ETV Bharat / sitara

ಹೊಸತನ ಬರಮಾಡಿಕೊಳ್ಳುವ ಸಂಭ್ರಮದಲ್ಲಿ ಕುಡಿದು ವಾಹನ ಚಲಾಯಿಸಬೇಡಿ: ಯಶ್ ಮನವಿ - ಬೆಂಗಳೂರು ಪೊಲೀಸರ ಅಭಿಯಾನಕ್ಕೆ ಯಶ್ ಸಾಥ್

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕುಡಿದು ವಾಹನ ಚಾಲನೆ ಮಾಡದಂತೆ ಅರಿವು ಮೂಡಿಸಲು ಬೆಂಗಳೂರು ನಗರ ಸಂಚಾರ ಪೊಲೀಸರು ಕೈಗೊಂಡಿರುವ ಬಿ-ಸೇಫ್ ಅಭಿಯಾನಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ಕೈ ಜೋಡಿಸಿದ್ದಾರೆ.

Yash
ಯಶ್ ಮನವಿ

By

Published : Dec 28, 2019, 2:57 PM IST

ಬೆಂಗಳೂರು:ಹೊಸ ವರ್ಷದ ಆಗಮನಕ್ಕೆ ಇನ್ನು ಮೂರು ದಿನಗಳಷ್ಟೇ ಬಾಕಿ ಇದೆ. ಎಲ್ಲರೂ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಂಭ್ರಮದಿಂದ ಕಾಯುತ್ತಿದ್ದಾರೆ. ಇನ್ನು ಪಾರ್ಟಿ ಸಂಭ್ರಮದಲ್ಲಿ ಕೆಲವೊಮ್ಮೆ ಅನಾಹುತಗಳು ಸಂಭವಿಸುವುದುಂಟು. ಈ ಕಾರಣಕ್ಕಾಗಿ ಪೊಲೀಸರು ಮುನ್ನೆಚ್ಚೆರಿಕೆ ಕ್ರಮ ಕೈಗೊಂಡಿದ್ದಾರೆ.

ಕುಡಿದು ವಾಹನ ಚಲಾಯಿಸದಂತೆ ಯಶ್ ಮನವಿ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕುಡಿದು ವಾಹನ ಚಾಲನೆ ಮಾಡದಂತೆ ಅರಿವು ಮೂಡಿಸಲು ಬೆಂಗಳೂರು ನಗರ ಸಂಚಾರ ಪೊಲೀಸರು ಕೈಗೊಂಡಿರುವ ಬಿ-ಸೇಫ್ ಅಭಿಯಾನಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ಕೈ ಜೋಡಿಸಿದ್ದಾರೆ. ಮದ್ಯಪಾನ ಮಾಡಿ ವಾಹನ ಓಡಿಸದಂತೆ ಅರಿವು ಮೂಡಿಸುವ ಸಲುವಾಗಿ ಯಶ್ ವಿಡಿಯೋ ಮೂಲಕ ವಾಹನ ಸವಾರರರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಯ್ಯೂಟ್ಯೂಬ್​​, ಫೇಸ್ ಬುಕ್, ಇನ್ಸ್​​ಟಾಗ್ರಾಮ್ ಸೇರಿದಂತೆ ಇನ್ನಿತರ ಸೋಷಿಯಲ್ ಮೀಡಿಯಾಗಳಲ್ಲಿ ನಗರ ಪೊಲೀಸರು ಈ ವಿಡಿಯೋ ಅಪ್​​​ಲೋಡ್​​​​​​​​​​​​​ ಮಾಡಿದ್ದಾರೆ. 'ಹೊಸತನವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ, ಪಡೆದುಕೊಳ್ಳುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು, ಒಂದು ದಿನದ ಖುಷಿಯಾಗಿ ಅನಾಹುತ ತಂದುಕೊಳ್ಳಬೇಡಿ, ನಿಮ್ಮನ್ನು ನಂಬಿರುವವರಿಗೆ ಮೋಸ ಮಾಡಬೇಡಿ' ಎಂದು ಯಶ್ ಮನವಿ ಮಾಡಿದ್ದಾರೆ.

ABOUT THE AUTHOR

...view details