ಕರ್ನಾಟಕ

karnataka

ತಮಿಳುನಾಡಿನ ಶನೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದ ಡಿಸಿಎಂ, ನಟ ಯಶ್‌

By

Published : Jan 3, 2021, 3:03 PM IST

ವಿಶೇಷ ಹೆಲಿಕಾಫ್ಟರ್ ಮೂಲಕ ನಟ ಯಶ್ ಮತ್ತು ಡಿಸಿಎಂ ಅಶ್ವತ್ಥ ನಾರಾಯಣ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಡಿಸಿಎಂ ಜೊತೆ ತಮಿಳುನಾಡಿದ ಶನೇಶ್ವರ ದೇವಾಲಯಕ್ಕೆ ಯಶ್​ ಭೇಟಿ
ಡಿಸಿಎಂ ಜೊತೆ ತಮಿಳುನಾಡಿದ ಶನೇಶ್ವರ ದೇವಾಲಯಕ್ಕೆ ಯಶ್​ ಭೇಟಿ

ರಾಕಿಂಗ್ ಸ್ಟಾರ್ ಯಶ್ ಮತ್ತು ಡಿಸಿಎಂ ಅಶ್ವತ್ಥ ನಾರಾಯಣ ಅವರು ಇಂದು ತಮಿಳುನಾಡಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮಿಳುನಾಡಿನ ಶನೇಶ್ವರ ದೇವಾಲಯದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ನಟ ಯಶ್​

ವಿಶೇಷ ಹೆಲಿಕಾಫ್ಟರ್ ಮೂಲಕ ಇಬ್ಬರೂ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಾಲಯಕ್ಕೆ ಆಗಮಿಸಿದರು.

ತಮಿಳುನಾಡಿನ ಶನೇಶ್ವರ ದೇವಾಲಯದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ನಟ ಯಶ್​

ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಯಶ್ ಭಾಗದ ಕೆಜಿಎಫ್ ಶೂಟಿಂಗ್ ಮುಗಿದಿದೆ ಎನ್ನಲಾಗಿದೆ. ಇದೇ ತಿಂಗಳಲ್ಲಿ ಚಿತ್ರದ ಶೂಟಿಂಗ್​ ಸಂಪೂರ್ಣವಾಗಿ ಮುಕ್ತಾಯವಾಗಲಿದೆ ಎಂಬ ಮಾಹಿತಿ ದೊರೆತಿದೆ.

ABOUT THE AUTHOR

...view details