ನವದೆಹಲಿ:ತನ್ನ ಪ್ರಾಯೋಜಕತ್ವದ ನೀತಿಯನ್ನು ಪರಿಶೀಲಿಸಲು ಬಿಸಿಸಿಐ ಮುಕ್ತವಾಗಿದೆ. ಆದರೆ ಪ್ರಸ್ತುತ ಐಪಿಎಲ್ ಶೀರ್ಷಿಕೆ ಪ್ರಾಯೋಜಕನಾಗಿರುವ ವಿವೋದೊಂದಿಗಿನ ಒಪ್ಪಂದ ಕೊನೆಗೊಳಿಸುವ ಯಾವುದೇ ಯೋಚನೆ ಇಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ.
ಈ ವಾರದ ಆರಂಭದಲ್ಲಿ ಗಾಲ್ವಾನ್ ಕಣಿವೆಯಲ್ಲಿ ಭಾರತ ಹಾಗೂ ಚೀನಾದ ನಡುವಿನ ಗಡಿ ಘರ್ಷಣೆಯ ಬಳಿಕ ಭಾರತದಲ್ಲಿ ಚೀನಾ ವಿರೋಧಿ ಭಾವನೆಗಳು ಹೆಚ್ಚಿವೆ. ನಾಲ್ಕು ದಶಕಗಳ ಭಾರತ - ಚೀನಾ ಗಡಿಯಲ್ಲಿ ನಡೆದ ಚಕಮಕಿಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ.