ಹೈದರಾಬಾದ್:ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲಖನೌ ಮತ್ತು ಕೋಲ್ಕತ್ತಾದಲ್ಲಿ ನಡೆಯಲಿರುವ ಎರಡು ಮತ್ತು ಮೂರನೇ ಏಕದಿನ ಪಂದ್ಯಗಳು ಕೊರೊನಾ ವೈರಸ್ ಭೀತಿದಿಂದ ಪ್ರೇಕ್ಷಕರಿಲ್ಲದೆ ನಡೆಯಲಿವೆ.
'ಕ್ರೀಡಾ ಸಚಿವಾಲಯ ಹೊರಡಿಸಿದ ಸಲಹೆಯ ನಂತರ, ನಾವು ಮತ್ತು ಬಿಸಿಸಿಐ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಪ್ರೇಕ್ಷಕರಿಲ್ಲದೆ ಎರಡನೇ ಏಕದಿನ ಪಂದ್ಯವನ್ನು ನಡೆಸಲು ನಿರ್ಧರಿಸಲಾಗಿದೆ' ಎಂದು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.