ಕರ್ನಾಟಕ

karnataka

By

Published : Mar 13, 2020, 1:16 PM IST

ETV Bharat / sports

ಮಹಾಮಾರಿ ಕೊರೊನಾ ಭೀತಿ: ಐಪಿಎಲ್​​ ಬ್ಯಾನ್​ ಮಾಡಿ ಆದೇಶ ಹೊರಡಿಸಿದ ದೆಹಲಿ ಸರ್ಕಾರ!

ಪ್ರಸಕ್ತ ಸಾಲಿನ ಇಂಡಿಯನ್​ ಪ್ರೀಮಿಯರ್​ ಲೀಗ್​ ಮೇಲೆ ಕೊರೊನಾ ಕರಿಛಾಯೆ ಬಿದ್ದಿದ್ದು, ದೆಹಲಿಯಲ್ಲಿ ಪ್ರಸಕ್ತ ಸಾಲಿನ ಟೂರ್ನಿ ನಡೆಸದಿರುವ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಹತ್ವದ ವಿಷಯ ಬಹಿರಂಗಗೊಂಡಿದೆ.

Delhi govt bans sports gathering, including IPL
Delhi govt bans sports gathering, including IPL

ನವದೆಹಲಿ:ಮಹಾಮಾರಿ ಕೊರೊನಾ ಸೋಂಕು ಹರಡುವ ಕಾರಣಕ್ಕಾಗಿ ಈ ಸಲದ ಇಂಡಿಯನ್​ ಪ್ರೀಮಿಯರ್​ ಲೀಗ್​ ಕ್ರೀಡಾಭಿಮಾನಿಗಳಿಲ್ಲದೇ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ದೆಹಲಿಯಲ್ಲಿ ಇಂಡಿಯನ್​ ಪ್ರೀಮಿಯರ್​ ಲೀಗ್​​ ನಡೆಸದಿರುವ ಸಂಬಂಧ ಅಲ್ಲಿನ ಸರ್ಕಾರ ನಿರ್ಧಾರ ಕೈಗೊಂಡಿದೆ.

ಈಗಾಗಲೇ ದೆಹಲಿ ಸರ್ಕಾರ ಎಲ್ಲ ರೀತಿಯ ಕ್ರೀಡೆ ಬ್ಯಾನ್​ ಮಾಡಿ ಆದೇಶ ಹೊರಹಾಕಿದ್ದು, ಇದೀಗ ಇಂಡಿಯನ್​ ಪ್ರೀಮಿಯರ್​ ಲೀಗ್​ ಕೂಡ ನಡೆಸದಿರುವ ಮುಂದಾಗಿದೆ. 200ಕ್ಕಿಂತಲೂ ಹೆಚ್ಚಿನ ಜನರು ಒಟ್ಟಿಗೆ ಸೇರುವ ಕಾರ್ಯಕ್ರಮಗಳ ಮೇಲೆ ನಿಷೇಧ ಹಾಕಿರುವ ಕೇಜ್ರಿವಾಲ್​ ಸರ್ಕಾರ, ಶಾಲೆ, ಕಾಲೇಜ್​ ಹಾಗೂ ಸಿನಿಮಾ ಹಾಲ್​ಗಳನ್ನ ಮಾರ್ಚ್​​ 31ರವರೆಗೆ ಬಂದ್​ ಮಾಡಿ ಮಹತ್ವದ ನಿರ್ಧಾರ ಹೊರಹಾಕಿದೆ.

ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ

ಮುಂದಿನ ಆದೇಶ ಹೊರ ಬೀಳುವವರೆಗೂ ದೆಹಲಿಯಲ್ಲಿ ಇಂಡಿಯನ್​ ಪ್ರೀಮಿಯರ್​ ಲೀಗ್​ ನಡೆಸದಿರುವ ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಹೇಳಿದ್ದಾರೆ.. ದೇಶದಲ್ಲಿ ಕೊರೊನಾ ಸೋಂಕು ತಗುಲಿರುವವರ ಸಂಖ್ಯೆ ಭಾರತದಲ್ಲೂ 70ರ ಗಡಿ ದಾಟಿದ್ದು, ಕರ್ನಾಟಕದಲ್ಲಿ ಓರ್ವ ವೃದ್ಧ ಇದೇ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಇನ್ನು ಮಹಾರಾಷ್ಟ್ರದಲ್ಲೂ ಯಾವುದೇ ಕ್ರೀಡಾಭಿಮಾನಿಗಳಿಲ್ಲದೇ ಐಪಿಎಲ್​ ಟೂರ್ನಿ ನಡೆಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ಅಧಿವೇಶನದಲ್ಲಿ ಇದರ ಬಗ್ಗೆ ಚರ್ಚೆ ನಡೆಸಲು ಮುಂದಾಗಿದೆ. ಮಾರ್ಚ್​ 29ರಂದು ಇಂಡಿಯನ್​ ಪ್ರೀಮಿಯರ್​ ಲೀಗ್​ ಆರಂಭಗೊಳ್ಳಲಿದ್ದು, ದೆಹಲಿ ಕ್ಯಾಪಿಟಲ್ಸ್​ ತನ್ನ ತವರು ಪಂದ್ಯಗಳನ್ನ ದೆಹಲಿಯಲ್ಲಿ ಆಡಬೇಕಾಗಿತ್ತು. ಆದರೆ, ಇದೀಗ ದೆಹಲಿ ಸರ್ಕಾರದಿಂದ ಮಹತ್ವದ ನಿರ್ಧಾರ ಹೊರಬಿದ್ದಿರುವ ಕಾರಣ, ಪ್ರಾಂಚೈಸಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ABOUT THE AUTHOR

...view details