ಅಬುಧಾಬಿ: ಪ್ಲೇ ಆಫ್ ತಲುಪಲು ಕೊನೆಯ ಅವಕಾಶ ವಾಗಿರುವ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದ್ದಾರೆ.
ಕೊನೆಯ ಎರಡು ಸ್ಥಾನದಲ್ಲಿರುವ ರಾಜಸ್ಥಾನ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಎರಡು ಇಂದು ಮುಖಾಮುಖಿಯಾಗುತ್ತಿವೆ. ಎರಡು ತಂಡಗಳು ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿದ್ದು, 3 ಗೆಲುವು ಹಾಗೂ 6 ಸೋಲುಕಂಡಿವೆ. ಟೂರ್ನಿಯಲ್ಲಿ ಉಳಿಯಬೇಕಾದರೆ ಕನಿಷ್ಠ 8 ಪಂದ್ಯಗಳಲ್ಲಿ ಗೆಲ್ಲಬೇಕಾಗಿರುವುದರಿಂದ ಮುಂದಿನ ಎಲ್ಲಾ ಪಂದ್ಯಗಳಲ್ಲೂ ಎರಡು ತಂಡಗಳು ಗೆಲ್ಲಲೇಬೇಕಾಗಿದೆ.
ಇಂದಿನ ಪಂದ್ಯದಲ್ಲಿ ಚೆನ್ನೈ ತಂಡ ಗಾಯಾಳು ಬ್ರಾವೋ ಬದಲು ಹೇಜಲ್ವುಡ್ ಕಣಕ್ಕಿಳಿಯುತ್ತಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್: ಸ್ಯಾಮ್ ಕರ್ರನ್, ಫಾಫ್ ಡುಪ್ಲೆಸಿ, ಶೇನ್ ವಾಟ್ಸನ್, ಅಂಬಟಿ ರಾಯುಡು, ಎಂ.ಎಸ್. ಧೋನಿ (ನಾಯಕ), ರವೀಂದ್ರ ಜಡೇಜಾ, ಪಿಯೂಷ್ ಚಾವ್ಲಾ, ಹೇಜಲ್ವುಡ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಕರಣ್ ಶರ್ಮಾ.
ರಾಜಸ್ಥಾನ ರಾಯಲ್ಸ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ (ನಾಯಕ), ಜೋಸ್ ಬಟ್ಲರ್, ರಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಅಂಕಿತ್ ರಜಪೂತ್, ಕಾರ್ತಿಕ್ ತ್ಯಾಗಿ.