ದುಬೈ:ಟೂರ್ನಿಯಲ್ಲಿ ಅಮೋಘ ಪ್ರದರ್ಶನದಿಂದ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಪಂಜಾಬ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
14 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ಡೆಲ್ಲಿ ತಂಡಕ್ಕೆ ಈ ಪಂದ್ಯ ತನ್ನ ಗೆಲುವಿನ ಓಟವನ್ನು ಮುಂದುವರಿಸಿ ಅಗ್ರಸ್ಥಾನವನ್ನು ಕಾಪಾಡಿಕೊಳ್ಳುವತ್ತಾ ಗಮನ ಹರಿಸಿದೆ.ಈ ಪಂದ್ಯದಲ್ಲಿ ಮೂರು ಬದಲಾವಣೆಗಳೊಂದಿಗೆ ಡೆಲ್ಲಿ ಕಣಕ್ಕಿಳಿಯುತ್ತಿದೆ. ಗಾಯದಿಂದ ಚೇತರಿಸಿಕೊಂಡಿರುವ ಪಂತ್ ಹಾಗೂ ಹೆಟ್ಮೈರ್ , ರಹಾನೆ ಮತ್ತು ಕ್ಯಾರಿ ಜಾಗಕ್ಕೆ ಮರಳಿದ್ದರೆ, ನಾರ್ಜ್ ಬದಲಿಗೆ ಡೇನಿಯಲ್ ಸ್ಯಾಮ್ಸ್ ಐಪಿಎಲ್ಗೆ ಪದಾರ್ಪಣೆ ಮಾಡುತ್ತಿದ್ದಾರೆ.
ಇತ್ತ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ 3 ಗೆಲುವು ಹಾಗೂ 6 ಸೋಲು ಕಂಡಿರುವ ರಾಹುಲ್ ನೇತೃತ್ವದ ತಂಡ ಕಳೆದ 2 ಪಂದ್ಯಗಳ ಗೆಲುವಿನ ಆತ್ಮವಿಶ್ವಾಸದಿಂದ ಡೆಲ್ಲಿ ವಿರುದ್ಧ ಕಣಕ್ಕಿಳಿಯಲಿದೆ. ಈ ಹಿಂದಿನ ಮುಖಾಮುಖಿಯಲ್ಲಿ ಡೆಲ್ಲಿ ತಂಡದ ವಿರುದ್ಧ ಪ್ರಬಲ ಪೈಪೋಟಿಯ ಹೊರೆತಾಗಿಯೂ ಸೂಪರ್ ಓವರ್ನಲ್ಲಿ ಸೋಲು ಕಂಡು ನಿರಾಶೆಯನುಭವಿಸಿತ್ತು.