ಕೋಲ್ಕತ್ತಾ:ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ಬಯೋ - ಬಬಲ್ನಲ್ಲಿ ನಡೆಯುತ್ತಿದ್ದು, ಇದರಿಂದ ಕ್ರಿಕೆಟಿಗರಿಗೆ ಹೆಚ್ಚಿನ ಆರೋಗ್ಯ ಸಮಸ್ಯೆ ಆಗುವ ಸಾಧ್ಯತೆ ದಟ್ಟವಾಗಿರುತ್ತವೆ. ಇದೇ ವಿಚಾರವಾಗಿ ಇದೀಗ ಭಾರತೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಮಾತನಾಡಿದ್ದಾರೆ.
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಂತಹ ಕ್ರಿಕೆಟರ್ಸ್ಗೆ ಹೋಲಿಕೆ ಮಾಡಿದಾಗ ಭಾರತೀಯರು ಮಾನಸಿಕ ಆರೋಗ್ಯ ಸಮಸ್ಯೆ ಎದುರಿಸಲು ಹೆಚ್ಚಿನ ತಾಳ್ಮೆ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಪುನಾರಂಭಗೊಂಡಾಗಿನಿಂದಲೂ ಟೀಂ ಇಂಡಿಯಾ ಪ್ಲೇಯರ್ಸ್ ಬಯೋ - ಬಬಲ್ನಲ್ಲಿ ಉಳಿದುಕೊಳ್ಳಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ. ಅವರ ಜೀವನ ಹೋಟೆಲ್ ಮತ್ತು ಕ್ರೀಡಾಂಗಣಕ್ಕೆ ಮಾತ್ರ ಸೀಮಿತವಾಗಿದೆ. ಜತೆಗೆ ಹೊರಗಿನ ಜಗತ್ತಿನ ಪ್ರವೇಶ ಇಲ್ಲದೇ ಇರುವುದು ಸಾಕಷ್ಟು ಕಷ್ಟಕರವಾಗಿರುತ್ತದೆ ಎಂದು ತಿಳಿಸಿದ್ದಾರೆ.