ಶಾರ್ಜಾ: ಸತತ ಸೋಲಿನಿಂದ ಕಂಗೆಟ್ಟಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ..
ಇತ್ತ ಆಡಿರುವ 7 ಪಂದ್ಯಗಳಲ್ಲಿ 2 ಸೋಲು 5 ಜಯದೊಂದಿಗೆ 3ನೇ ಸ್ಥಾನದಲ್ಲಿರುವ ಆರ್ಸಿಬಿ ಇಂದಿನ ಪಂದ್ಯವನ್ನು ಗೆದ್ದು ಪ್ಲೇ ಆಫ್ಗೆ ಮತ್ತಷ್ಟು ಹತ್ತಿರವಾಗುವ ಆಶಯದಲ್ಲಿದೆ. ಆರ್ಸಿಬಿ ಯಾವುದೇ ಬದಲಾಣೆಯಿಲ್ಲದೆ ಆಡುತ್ತಿದೆ.
13ನೇ ಆವೃತ್ತಿಯಲ್ಲಿ ಆಡಿರುವ 7 ಪಂದ್ಯಗಳಲ್ಲಿ 6 ರಲ್ಲಿ ಸೋಲು ಕಂಡಿರುವ ಪಂಜಾಬ್ ತಂಡ ಕೇವಲ ಒಂದೇ ಒಂದು ಗೆಲುವು ಸಾಧಿಸಿದೆ. ಅದು ಆರ್ಸಿಬಿ ವಿರುದ್ಧವೇ ಎಂಬುದೇ ವಿಶೇಷ. ಇದೀಗ ಮತ್ತೆ ಆರ್ಸಿಬಿ ವಿರುದ್ಧವೇ ಗೆಲುವಿನ ಹಾದಿಗೆ ಮರಳುವ ಆಲೋಚನೆಯಲ್ಲಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ಮೂರು ಬಲಾವಣೆ ಮಾಡಿಕೊಂಡಿದೆ. ಕ್ರಿಸ್ ಗೇಲ್ ಕಣಕ್ಕಿಳಿಯುತ್ತಿದ್ದಾರೆ. ಯುವ ಆಲ್ರೌಂಡರ್ ದೀಪಕ್ ಹೂಡಾ ಕೂಡ ಮಂದೀಪ್ ಸಿಂಗ್ ಜಾಗದಲ್ಲಿ, ಪ್ರಭಸಿಮ್ರಾನ್ ಜಾಗಕ್ಕೆ ಎಂ ಆಶ್ವಿನ್ ಅವಕಾಶ ಪಡೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು : ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿ,ಕೀ), ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಕ್ರಿಸ್ ಮೋರಿಸ್, ಇಸುರು ಉದಾನ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜವೇಂದ್ರ ಚಹಾಲ್
ಕಿಂಗ್ಸ್ ಇಲೆವೆನ್ ಪಂಜಾಬ್ : ಕ್ರಿಸ್ ಗೇಲ್, ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್