ದುಬೈ: ರಾಯಲ್ ಚಾಂಲೆಂಜರ್ಸ್ ಬೆಂಗಳೂರು ತಂಡದಲ್ಲಿ 2011ರಿಂದ 2013 ರವರೆಗೆ ರಾರಾಜಿಸಿದ್ದ ವಿಂಡೀಸ್ ದೈತ್ಯ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಕಳೆದ 2 ವರ್ಷಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಆಡುತ್ತಿದ್ದಾರೆ. ಗುರುವಾರ ಪಂಜಾಬ್ ತಂಡ ಆರ್ಸಿಬಿ ಎದುರಿಸಲಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಪಂದ್ಯಕ್ಕೂ ಮೊದಲು ಮಾತನಾಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್, " ಕ್ರಿಸ್ ಗೇಲ್ ಟಿ-20 ಕ್ರಿಕೆಟ್ನ ಸ್ಫೋಟಕ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾಗಿದ್ದಾರೆ. ಅವರನ್ನು ಮೊದಲ ಪಂದ್ಯದಿಂದ ಕೈಬಿಡಬೇಕೆಂಬ ನಿರ್ಧಾರ ನಿಜಕ್ಕೂ ಅತ್ಯಂತ ಕಠಿಣವಾಗಿತ್ತು. ಆದರೆ, ಅವರು ಆದಷ್ಟು ಶೀಘ್ರದಲ್ಲೇ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಮರಳಲಿದ್ದಾರೆ" ಎಂದು ಹೇಳಿದ್ದಾರೆ.