ದುಬೈ:ಮಂಗಳವಾರ 13ನೇ ಆವೃತ್ತಿ ಐಪಿಎಲ್ ಮುಕ್ತಾಯವಾಗಿದೆ. ಮುಂಬೈ ಇಂಡಿಯನ್ಸ್ 5ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಆದರೆ, ಕೋವಿಡ್ ಸಂಕಷ್ಟದ ನಡುವೆಯೂ 3 ತಿಂಗಳ ಕಾಲ ಬಯೋಬಲ್ನಲ್ಲಿದ್ದು ಟೂರ್ನಿಯ ಯಶಸ್ಸಿಗೆ ಕಾರಣರಾದ ಎಲ್ಲ ಆಟಗಾರರಿಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಅರ್ಪಿಸಿದ್ದಾರೆ.
ಕೋವಿಡ್ 19 ನಿಂದಾಗಿ 13ನೇ ಆವೃತ್ತಿಯ ಐಪಿಎಲ್ ಯುಎಇಯಲ್ಲಿ ನಡೆದಿತ್ತು. ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ಗಳ ಜಯ ಸಾಧಿಸಿತು.
ಬಯೋ ಬಬಲ್ನಲ್ಲಿದ್ದು ಟೂರ್ನಿಯನ್ನು ಯಶಸ್ವಿಯಾಗಿಸಲು ನೆರವಾದ ಎಲ್ಲ ಐಪಿಎಲ್ ತಂಡಗಳ ಆಟಗಾರರಿಗೆ ಬಿಸಿಸಿಐ ಮತ್ತು ಎಲ್ಲ ಅಧಿಕಾರಿಗಳ ಪರವಾಗಿ ಮತ್ತು ವೈಯಕ್ತಿಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಬಯೋಬಬಲ್ ನಿಜಕ್ಕು ಮಾನಸಿಕವಾಗಿ ಕಠಿಣವಾಗಿದೆ. ಭಾರತೀಯ ಕ್ರಿಕೆಟ್ ಏನು ಎಂದು ತೋರಿಸಿಕೊಟ್ಟಿದ್ದೀರಾ ಎಂದು ಗಂಗೂಲಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಈ ಟೂರ್ನಿ ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಬೇಕಿತ್ತು. ಆದರೆ, ಭಾರತದಲ್ಲಿ ಕೊರೊನಾ ಭೀತಿಯಿಂದ ಮುಂದೂಡಲ್ಪಟ್ಟಿತ್ತು. ಕೆಲವು ತಿಂಗಳ ನಂತರ ಬಿಸಿಸಿಐ ಯುಎಇ ಕ್ರಿಕೆಟ್ ಸಹಯೋಗದಲ್ಲಿ ನಡೆಸಲು ತೀರ್ಮಾನಿಸಿತ್ತು.