ಬರ್ಮಿಂಗ್ಹ್ಯಾಮ್:ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಇಂದು ಇಂಗ್ಲೆಂಡ್ ವಿರುದ್ಧ ಸೆಣಸಾಟ ನಡೆಸಲಿದ್ದು, ಈ ಪಂದ್ಯದಲ್ಲಿ ಗೆಲುವು ದಾಖಲು ಮಾಡುವ ಮೂಲಕ ಸೆಮಿಫೈನಲ್ಗೆ ಲಗ್ಗೆಹಾಕುವ ಕನಸು ಕಾಣುತ್ತಿದೆ.
ಶಿಖರ್ ಧವನ್ ಗಾಯಗೊಂಡು ತಂಡದಿಂದ ಹೊರಬಿದ್ದ ಬಳಿಕ ಆಡುವ 11ರಲ್ಲಿ ಅವಕಾಶ ಪಡೆದುಕೊಂಡಿರುವ ಆಲ್ರೌಂಡರ್ ವಿಜಯ್ ಶಂಕರ್ ಬ್ಯಾಟಿಂಗ್ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ಏನು ನೀಡುತ್ತಿಲ್ಲ. ಪಾಕ್ ವಿರುದ್ಧ ಅಜೇಯ 15ರನ್ಗಳಿಸಿದ್ದ ವಿಜಯ್ ಶಂಕರ್, ಅಫ್ಘಾನ್ ವಿರುದ್ಧ 29ರನ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ 14ರನ್ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈಗಾಗಲೇ ಇವರ ಬ್ಯಾಟಿಂಗ್ ಬಗ್ಗೆ ಟೀಕೆಗಳು ಶುರುವಾಗಿದ್ದು, ಅವರನ್ನ ತಂಡದಿಂದ ಕೈಬಿಡಲು ಕ್ರೀಡಾಭಿಮಾನಿಗಳು ಆಗ್ರಹಿಸುತ್ತಿದ್ದಾರೆ.