ಕರ್ನಾಟಕ

karnataka

ETV Bharat / sports

ರಾಹುಲ್​ಗೆ ಏಕಲವ್ಯ ಪ್ರಶಸ್ತಿ: ಕಠಿಣ ಪರಿಶ್ರಮದಿಂದ ಆಡಿ ರಾಜ್ಯ, ದೇಶ ಹೆಮ್ಮೆ ಪಡುವಂತೆ ಮಾಡುವೆ ಎಂದ ಕೆಎಲ್​!

ಕನ್ನಡಿಗ, ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್​ ರಾಹುಲ್​ಗೆ ರಾಜ್ಯ ಸರ್ಕಾರ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಿದ್ದು, ಇದೀಗ ಕ್ರಿಕೆಟಿಗ ರಾಹುಲ್​ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.

By

Published : Nov 2, 2020, 10:58 PM IST

KL Rahul
KL Rahul

ಬೆಂಗಳೂರು: ಟೀಂ ಇಂಡಿಯಾದ ಉಪ ನಾಯಕ ಕೆಎಲ್​ ರಾಹುಲ್​ ಸೇರಿದಂತೆ ವಿವಿಧ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಿದ್ದು, ಇದಕ್ಕೆ ಟ್ವೀಟರ್​​ ಮೂಲಕ ಪ್ರತಿಕ್ರಿಯೆ ನೀಡಿರುವ ರಾಹುಲ್​ ಭಾವನಾತ್ಮಕ ಟ್ವೀಟ್​ ಮಾಡಿದ್ದಾರೆ.

ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಅಭಾರಿಯಾಗಿದ್ದೇನೆ.

ಮತ್ತೊಮ್ಮೆ ಧನ್ಯವಾದಗಳು ಎಂದಿರುವ ಕೆಎಲ್​​ ರಾಹುಲ್​, ನನಗೆ ಏಕಲವ್ಯ ಪ್ರಶಸ್ತಿ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್​, ತಂಡದ ಪ್ಲೇಯರ್ಸ್​, ಸ್ನೇಹಿತರು ಹಾಗೂ ಕುಟುಂಬದ ಸಹಾಯವಿಲ್ಲದೆ ಈ ಸಾಧನೆ ಮಾಡಲು ಅಸಾಧ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಪರಿಶ್ರಮದ ಮೂಲಕ ಆಟವಾಡಿ, ನಮ್ಮ ರಾಜ್ಯ ಹಾಗೂ ದೇಶ ಹೆಮ್ಮೆ ಪಡುವಂತೆ ಮಾಡುತ್ತೇನೆ ಎಂದು ತಿಳಿಸಿ ಟ್ವೀಟ್ ಮಾಡಿದ್ದಾರೆ.

ಇಂಡಿಯನ್​ ಪ್ರೀಮಿಯರ್​ ಲೀಗ್​ನಲ್ಲಿ ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡದ ಕ್ಯಾಪ್ಟನ್​ ಆಗಿದ್ದು, ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ, ಟಿ-20 ಹಾಗೂ ಟೆಸ್ಟ್​ ಪಂದ್ಯಗಳಿಗೆ ಆಯ್ಕೆಯಾಗಿದ್ದು, ಸೀಮಿತ​ ಓವರ್​ಗಳ ಉಪ ನಾಯಕರಾಗಿ ಆಯ್ಕೆಯಾಗಿದ್ದಾರೆ. ಕೆಎಲ್​ ರಾಹುಲ್​ ಜತೆಗೆ ಕನ್ನಡಿಗ ಮಯಾಂಕ್​ ಅಗರವಾಲ್​ಗೂ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ABOUT THE AUTHOR

...view details