ನವದೆಹಲಿ: ಲೆಬನಾನ್ ರಾಜಧಾನಿ ಬೈರುತ್ ಬಂದರಿನಲ್ಲಿ ಮಂಗಳವಾರ ನಡೆದ ಸ್ಫೋಟದಲ್ಲಿ ಮೃತಪಟ್ಟವರಿಗೆ ಭಾರತ ತಂಡದ ನಾಯಕ ಹಾಗೂ ತಂಡದ ಇತರೆ ಸದಸ್ಯರು ಸಂತಾಪ ಸೂಚಿಸಿದ್ದಾರೆ.
ಬುಧವಾರ ಬೈರುತ್ ಬಂದರಿನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಸುಮಾರು 78 ಮಂದಿ ಸಾವನ್ನಪ್ಪಿದ್ದು, 4000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾಬ್ ಆರೋಗ್ಯ ಸಚಿವರು ತಿಳಿಸಿದ್ದಾರೆ. ಈ ದಾರುಣ ಘಟನೆಯಲ್ಲಿ ಮೃತಪಟ್ಟ ಬಡಜನರ ಆತ್ಮಕ್ಕೆ ಶಾಂತಿಕೋರಿ ಕೊಹ್ಲಿ ಮತ್ತು ಬಳಗ ದೇವರಲ್ಲಿ ಪ್ರಾರ್ಥಿಸಿದ್ದಾರೆ.
"ಇದೊಂದು ಹೃದಯ ವಿದ್ರಾವಕ ಘಟನೆಯಾಗಿದೆ. ಲೆಬನಾನ್ ಜನತೆಯ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ " ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.