ಕರ್ನಾಟಕ

karnataka

By

Published : Oct 29, 2020, 5:04 AM IST

ETV Bharat / sports

ಸೂರ್ಯಕುಮಾರ್​ ಭಾರತ ತಂಡಕ್ಕೆ ಆಯ್ಕೆಯಾಗದಿರುವುದು ನಿರಾಸೆ ಮೂಡಿಸಿದೆ: ಪೊಲಾರ್ಡ್

ಇಂಡಿಯನ್​ ಪ್ರೀಮಿಯರ್​ ಲೀಗ್​ನಲ್ಲಿ ಸೂರ್ಯಕುಮಾರ್​ ಯಾದವ್ ಉತ್ತಮ ಪ್ರದರ್ಶನ ನೀಡ್ತಿದ್ದು, ಆದರೂ ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾಗಿಲ್ಲ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪೊಲಾರ್ಡ್​ ಮಾತನಾಡಿದ್ದಾರೆ.

Suryakumar
Suryakumar

ಅಬುಧಾಬಿ:ಇಂಡಿಯನ್​ ಪ್ರಿಮೀಯರ್​ ಲೀಗ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು ದಾಖಲು ಮಾಡಿದ್ದು, ಈ ಮೂಲಕ ಮೊದಲ ತಂಡವಾಗಿ ಪ್ಲೇ- ಆಫ್​ ಹಂತಕ್ಕೆ ಲಗ್ಗೆ ಹಾಕಿದೆ.

ಆರ್​ಸಿಬಿ ನೀಡಿದ್ದ 165ರನ್​ಗಳ ಟಾರ್ಗೆಟ್​ ಬೆನ್ನತ್ತಿದ್ದ ಮುಂಬೈ ಸೂರ್ಯಕುಮಾರ್​ ಯಾದವ್​​ ಅವರ ಅಜೇಯ 79ರನ್​ಗಳ ನೇರವಿನಿಂದ 19.1 ಓವರ್​ಗಳಲ್ಲಿ ಗುರಿ ಮುಟ್ಟಿದೆ. ಪ್ರಸಕ್ತ ಸಾಲಿನ ಐಪಿಎಲ್​ನಲ್ಲಿ ಸೂರ್ಯಕುಮಾರ್​ ಯಾದವ್​ ಉತ್ತಮ ಪ್ರದರ್ಶನ ನೀಡ್ತಿದ್ದು, ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಗೆ ಆಯ್ಕೆಯಾಗಿಲ್ಲ.

ಇದೇ ವಿಷಯವಾಗಿ ಮಾತನಾಡಿರುವ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಪ್ಟನ್​ ಕಿರನ್​ ಪೊಲಾರ್ಡ್​, ಸೂರ್ಯಕುಮಾರ್​ ಯಾದವ್​ ಟೀಂ ಇಂಡಿಯಾಗೆ ಆಯ್ಕೆಯಾಗದಿರುವುದು ನಿರಾಸೆ ಮೂಡಿಸಿದೆ ಎಂದಿದ್ದಾರೆ. ವಿಕೆಟ್​ ಕಳೆದುಕೊಂಡಿದ್ದರೂ, ಉತ್ತಮ ಸ್ಟ್ರೈಕ್​ ರೇಟ್​ನಲ್ಲಿ ಸೂರ್ಯಕುಮಾರ್​ ಯಾದವ್​ ಬ್ಯಾಟಿಂಗ್​ ನಡೆಸಿದರು. ಸ್ಥಿರವಾಗಿ ಪ್ರದರ್ಶನ ನೀಡಿದರೆ ಖಂಡಿತವಾಗಿ ಪ್ರತಿಫಲ ಸಿಗಲಿದೆ ಎಂದು ಪೊಲಾರ್ಡ್​ ತಿಳಿಸಿದರು.

ABOUT THE AUTHOR

...view details