ಕರ್ನಾಟಕ

karnataka

By

Published : Apr 10, 2020, 8:05 PM IST

ETV Bharat / sports

ಅನ್ನ ದೇವರ ಮುಂದೆ..: ಪ್ರತಿ ತಿಂಗಳು 5 ಸಾವಿರ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಿದ್ದಾರೆ 'ಕ್ರಿಕೆಟ್‌ ದೇವರು'

ರಕ್ಕಸ ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿರುವ ಮಾಸ್ಟರ್​ ಬ್ಲಾಸ್ಟರ್​ ಸಚಿನ್​ ತೆಂಡೂಲ್ಕರ್​​ ಇದೀಗ ಮತ್ತಷ್ಟು ಮಾನವೀಯ ಕಾರ್ಯಕ್ಕೆ ಮುಂದಾಗಿದ್ದಾರೆ.

Cricket icon Sachin Tendulkar
Cricket icon Sachin Tendulkar

ಮುಂಬೈ: ಕೊರೊನಾ ವಿರುದ್ಧ ಹೋರಾಟಕ್ಕೆ ಮಾಸ್ಟರ್​ ಬ್ಲಾಸ್ಟರ್​ ಸಚಿನ್​ ತೆಂಡೂಲ್ಕರ್​ ಈಗಾಗಲೇ 50 ಲಕ್ಷ ರೂ ದೇಣಿಗೆ ನೀಡಿದ್ದು, ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಕಾರ್ಯಕ್ಕೆ ಹೆಜ್ಜೆ ಇಟ್ಟಿದ್ದಾರೆ.

ಸಚಿನ್ ತೆಂಡೂಲ್ಕರ್ ಇದೀಗ ಪ್ರತಿ ತಿಂಗಳು 5 ಸಾವಿರ ಜನರಿಗೆ ಊಟ ನೀಡುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಆದಾಯ ರಹಿತ ಸಂಸ್ಥೆ ಅಪ್ನಾಲಯದ ಮೂಲಕ ಈ ಕೆಲಸ ಮಾಡಲು ಕ್ರಿಕೆಟ್ ದಂತಕಥೆ​ ನಿರ್ಧರಿಸಿದ್ದಾರೆ. ಅವರ ಈ ನಿರ್ಧಾರಕ್ಕೆ ಈಗಾಗಲೇ ಅಪ್ನಾಲಯ್​ ಟ್ವೀಟ್ ಮಾಡಿ ಮೆಚ್ಚುಗೆ ಸೂಚಿಸಿದ್ದು, ಪ್ರತಿ ತಿಂಗಳು ನೀವು ನೀಡುವ ರೇಷನ್​ 5 ಸಾವಿರ ಜನರಿಗೆ ತಲುಪಿಸುವ ಕೆಲಸ ನಮ್ಮದು ಎಂದಿದೆ.

ಸಚಿನ್ ತೆಂಡೂಲ್ಕರ್​ ಪ್ರಧಾನಿ ವಿಪತ್ತು ಪರಿಹಾರ ನಿಧಿಗೆ 25 ಲಕ್ಷ ರೂ. ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಿದ್ದಾರೆ.

ಇದರ ಜತೆಗೆ ಸಚಿನ್ ಸಾಮಾಜಿಕ ಜಾಲತಾಣಗಳ ಮೂಲಕ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.

ABOUT THE AUTHOR

...view details