ಪುಣೆ:ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಸರಣಿಯಲ್ಲಿ ಅದ್ಭುತ ಬೌಲಿಂಗ್ ಮೂಲಕ 2-1ರಲ್ಲಿ ಸರಣಿ ಗೆಲ್ಲಲು ಪ್ರಮುಖ ಪಾತ್ರವಹಿಸಿದ ವೇಗಿ ಭುವನೇಶ್ವರ್ ಕುಮಾರ್ಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡದಿರುವುದಕ್ಕೆ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಭಾನುವಾರ ನಡೆದ ಕೊನೆಯ ಪಂದ್ಯವನ್ನು ಭಾರತ ಗೆಲ್ಲುವುದರೊಂದಿಗೆ ಏಕದಿನ ಸರಣಿಯನ್ನು 2-1ರಲ್ಲಿ ಭಾರತ ವಶಪಡಿಸಿಕೊಂಡಿತು. ಮೂರು ಪಂದ್ಯಗಳಿಂದ 219 ರನ್ಗಳಿಸಿದ್ದ ಜಾನಿ ಬೈರ್ಸ್ಟೋವ್ಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಯಿತು. ಆದರೆ ಇದಕ್ಕೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 4 ವಿಕೆಟ್ ಪಡೆದಿದ್ದ ಶಾರ್ದುಲ್ ಠಾಕೂರ್ಗೆ ಪಂದ್ಯ ಶ್ರೇಷ್ಠ ಮತ್ತು ಸರಣಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ಭುವನೇಶ್ವರ್ ಕುಮಾರ್ಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.