ಬೆಂಗಳೂರು : ಏಕಲವ್ಯ ಪ್ರಶಸ್ತಿ ಪಡೆದ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಸರ್ಕಾರಕ್ಕೆ ಧನ್ಯವಾದ ಹೇಳಿದ ಏಕಲವ್ಯ ಪ್ರಶಸ್ತಿ ವಿಜೇತ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ
ಏಕಲವ್ಯ ಪ್ರಶಸ್ತಿ ನೀಡಿದ ಸರ್ಕಾರಕ್ಕೆ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಧನ್ಯವಾದ ಹೇಳಿದ್ದಾರೆ.
ಸರ್ಕಾರಕ್ಕೆ ಧನ್ಯವಾದ ಹೇಳಿದ ವೇದಾ ಕೃಷ್ಣಮೂರ್ತಿ
ಕೆಲವು ಕಾರಣಾಂತರಗಳಿಂದ ಅದ್ಭುತ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಆದರೆ, ನನಗೆ ಏಕಲವ್ಯ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ತುಂಬಾ ಕೃತಜ್ಞತೆ ಸಲ್ಲಿಸುತ್ತೇನೆ. ಸದಾಕಾಲ ನನ್ನನ್ನು ಬೆಂಬಲಿಸಿದ ನನ್ನ ಕುಟುಂಬ, ಎಲ್ಲಾ ತರಬೇತುದಾರರು, ತಂಡದ ಸದಸ್ಯರು ಮತ್ತು ಹಿತೈಷಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಐಪಿಎಲ್ ಪಂದ್ಯ ನಡೆಯುತ್ತಿದ್ದ ಹಿನ್ನೆಲೆ, ವೇದಾ ಕೃಷ್ಣಮೂರ್ತಿ ಯುಎಇನಲ್ಲಿದ್ದರು. ಹೀಗಾಗಿ, ಕಾರ್ಯಕ್ರಮಕ್ಕೆ ಗೈರಾಗಿದ್ದರು.