ಕರ್ನಾಟಕ

karnataka

ETV Bharat / sports

'ಕನಸು ನನಸಾಗಿದೆ'.. ವಿಶ್ವಕಪ್​​ ತಂಡದಲ್ಲಿ ಸ್ಥಾನ ಪಡೆದ ದಿನೇಶ್ ಪ್ರತಿಕ್ರಿಯೆ

ಕಾಂಗರೂ ನಾಡಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​​ಗೋಸ್ಕರ ಟೀಂ ಇಂಡಿಯಾ ಪ್ರಕಟಗೊಂಡಿದೆ. 15 ಸದಸ್ಯರ ಬಳಗದಲ್ಲಿ ಹಿರಿಯ ಅನುಭವಿ ಆಟಗಾರ ದಿನೇಶ್ ಕಾರ್ತಿಕ್​ಗೆ ಅವಕಾಶ ನೀಡಲಾಗಿದೆ.

By

Published : Sep 13, 2022, 7:24 AM IST

Dinesh Karthik
Dinesh Karthik

ಹೈದರಾಬಾದ್​​: ಮುಂದಿನ ತಿಂಗಳಿಂದ ಆಸ್ಟ್ರೇಲಿಯಾದಲ್ಲಿ ಆರಂಭಗೊಳ್ಳಲಿರುವ ಬಹುನಿರೀಕ್ಷಿತ ಟಿ20 ವಿಶ್ವಕಪ್​​ಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡದಲ್ಲಿ ಅನುಭವಿ ಆಟಗಾರ ದಿನೇಶ್ ಕಾರ್ತಿಕ್​ಗೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, 'ಕನಸು ನನಸಾಗಿದೆ' ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

2022ರಲ್ಲಿ ನಡೆದ ಇಂಡಿಯನ್​ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ​ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್​​ಗೆ ಕಮ್​​ಬ್ಯಾಕ್ ಮಾಡಿರುವ ದಿನೇಶ್ ಕಾರ್ತಿಕ್​ ತಂಡದಲ್ಲಿ ಫಿನಿಶರ್​ ಪಾತ್ರ ನಿರ್ವಹಿಸುತ್ತಿದ್ದಾರೆ. ಜೊತೆಗೆ ವೆಸ್ಟ್​ ಇಂಡೀಸ್​, ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ಸರಣಿಗಳಲ್ಲೂ ಅವಕಾಶ ನೀಡಲಾಗಿತ್ತು. ಇದಾದ ಬಳಿಕ ಏಷ್ಯಾಕಪ್​​ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಡಿಕೆ ಇದೀಗ ಟಿ20 ವಿಶ್ವಕಪ್​​ನಲ್ಲೂ ಮೈದಾನಕ್ಕಿಳಿಯಲಿದ್ದಾರೆ. ಈ ಮೂಲಕ ಸ್ಫೋಟಕ ಬ್ಯಾಟಿಂಗ್​ ಪ್ರದರ್ಶನ ನೀಡಲು ಮತ್ತೊಮ್ಮೆ ಸಜ್ಜಾಗಿದ್ದಾರೆ.

2007ರಲ್ಲಿ ಟಿ20 ವಿಶ್ವಕಪ್​ ಗೆದ್ದ ತಂಡದಲ್ಲಿ ದಿನೇಶ್ ಕಾರ್ತಿಕ್​​

ಟೀಂ ಇಂಡಿಯಾ ಪರ ಹಿಂದೆ 2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್​​​ ಪಂದ್ಯವನ್ನಾಡಿದ್ದ ದಿನೇಶ್ ಕಾರ್ತಿಕ್​ ತನದಂತರ 2013ರ ಐಸಿಸಿ ಚಾಂಪಿಯನ್​ ಟ್ರೋಫಿಯಲ್ಲೂ ಅವಕಾಶ ಪಡೆದುಕೊಂಡಿದ್ದರು. ವಿಶೇಷವೆಂದರೆ ಈ ಎರಡು ಟೂರ್ನಿಗಳಲ್ಲಿ ಭಾರತ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. 2004ರಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡಿರುವ ದಿನೇಶ್ ಕಾರ್ತಿಕ್​, ಅನೇಕ ಏಳು-ಬೀಳು ಕಂಡಿದ್ದಾರೆ. ತಂಡದಲ್ಲಿ ಅವಕಾಶ ಸಿಗದ ಸಂದರ್ಭದಲ್ಲಿ ಕಾಮೆಂಟರ್​ ಆಗಿ ಕಾರ್ಯನಿರ್ವಹಿಸಿರುವ ಕಾರ್ತಿಕ್​, ಇದೀಗ ಮತ್ತೊಮ್ಮೆ ಟೀಂನಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

Asia Cup 2022: ಹಾರ್ದಿಕ್​ ಆಟಕ್ಕೆ ತಲೆಬಾಗಿ ಮೆಚ್ಚುಗೆ ವ್ಯಕ್ತಪಡಿಸಿದ ದಿನೇಶ್ ಕಾರ್ತಿಕ್‌.. ವಿಡಿಯೋ ನೋಡಿ

ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ:ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು:ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್

ಈ ಹಿಂದೆ ಐಪಿಎಲ್​​ನಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ಅಬ್ಬರದಾಟ ಆಡಿದ್ದ ದಿನೇಶ್ ಕಾರ್ತಿಕ್​​ 34 ಎಸೆತಗಳಲ್ಲಿ ತಲಾ 5 ಬೌಂಡರಿ ಮತ್ತು ಸಿಕ್ಸರ್‌ಗಳಸಹಿತ ಅಜೇಯ 66 ರನ್ ಸಿಡಿಸಿ, ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದರು. ಈ ವೇಳೆ ಪ್ರಶ್ನೆ ಮಾಡಿದ್ದಾಗ ಟೀಂ ಇಂಡಿಯಾ ಪರ ಮತ್ತೊಮ್ಮೆ ಆಡಬೇಕೆಂಬುದು ನನ್ನ ದೊಡ್ಡ ಆಸೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆ ಸಹ ಮಾಡಲಾಗಿತ್ತು. 2022ರ ಐಪಿಎಲ್​​ನಲ್ಲಿ ದಿನೇಶ್ ಕಾರ್ತಿಕ್​ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿದಿದ್ದರು.

ABOUT THE AUTHOR

...view details