ಕರ್ನಾಟಕ

karnataka

By

Published : Jun 9, 2022, 2:18 PM IST

ETV Bharat / sports

ಟೀಂ ಇಂಡಿಯಾ ನಾಯಕತ್ವಕ್ಕೆ ಹಾರ್ದಿಕ್ ಪಾಂಡ್ಯ ಪ್ರಬಲ ಸ್ಪರ್ಧಿ: ಹರ್ಭಜನ್ ಸಿಂಗ್​

ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್​ ಟೈಟನ್ಸ್ ಚಾಂಪಿಯನ್​​ ಪಟ್ಟಕ್ಕೇರಿಸಿರುವ ಹಾರ್ದಿಕ್ ಪಾಂಡ್ಯ, ಟೀಂ ಇಂಡಿಯಾ ನಾಯಕತ್ವ ಸ್ಥಾನಕ್ಕೆ ಬರುವ ದಿನಗಳಲ್ಲಿ ದೊಡ್ಡ ಪೈಪೋಟಿ ನೀಡಲಿದ್ದಾರೆಂದು ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

Harbhajan Singh on Hardik Pandya's captaincy
Harbhajan Singh on Hardik Pandya's captaincy

ಮುಂಬೈ: ಇಂಡಿಯನ್​ ಪ್ರೀಮಿಯರ್ ಲೀಗ್​​ನಲ್ಲಿ ಗುಜರಾತ್​ ಟೈಟನ್ಸ್​ ನಾಯಕನಾಗಿ, ಚೊಚ್ಚಲ ಪ್ರಯತ್ನದಲ್ಲೇ ತಂಡಕ್ಕೆ ಪ್ರಶಸ್ತಿ ಗೆಲ್ಲಿಸಿಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಆಲ್​ರೌಂಡರ್​ಗೆ ಇದೀಗ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರವಾಗಿ ಟೀಂ ಇಂಡಿಯಾ ಮಾಜಿ ಆಟಗಾರ ಹರ್ಭಜನ್ ಸಿಂಗ್ ಮಾತನಾಡಿದ್ದಾರೆ.

ಚಾಂಪಿಯನ್​ ಗುಜರಾತ್​ ಟೈಟನ್ಸ್​ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಮುಂದಿನ ದಿನಗಳಲ್ಲಿ ಭಾರತದ ನಾಯಕತ್ವಕ್ಕೆ ಪ್ರಬಲ ಸ್ಪರ್ಧಿ ಎಂದು ಭಜ್ಜಿ ಹೇಳಿಕೊಂಡಿದ್ದಾರೆ. ಅವರಲ್ಲಿರುವ ಉದ್ದೇಶ ಮತ್ತು ಸಕಾರಾತ್ಮಕ ನಾಯಕತ್ವದ ಗುಣಗಳು ಭವಿಷ್ಯದಲ್ಲಿ ಭಾರತ ತಂಡದ ನಾಯಕನ ಸ್ಥಾನಕ್ಕೆ ಪ್ರಬಲನಾಗಿ ಮಾಡಲಿದೆ ಎಂದಿದ್ದಾರೆ. ಹಾರ್ದಿಕ್ ಪಾಂಡ್ಯ ನಿಖರವಾದ ನಿರ್ಧಾರ, ಮೈದಾನದಲ್ಲಿ ಆಟಗಾರರ ನಿಲ್ಲಿಸುವಿಕೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಗಾಯದ ಸಮಸ್ಯೆ ಹಾಗೂ ಶಸ್ತ್ರಚಿಕಿತ್ಸೆಯಿಂದಾಗಿ ಟೀಂ ಇಂಡಿಯಾದಿಂದ ಹೊರಬಿದ್ದಿದ್ದ ಪಾಂಡ್ಯ, ಐಪಿಎಲ್​​ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಹೀಗಾಗಿ, ಅವರಿಗೆ ಬಿಸಿಸಿಐ ಮಣೆ ಹಾಕಿತ್ತು. ಇಂದಿನಿಂದಲೇ ಟಿ20 ಸರಣಿ ಆರಂಭಗೊಳ್ಳಲಿದ್ದು, ಗಾಯಗೊಂಡಿರುವ ಕಾರಣ ರಾಹುಲ್​ ಹೊರಬಿದ್ದಿದ್ದಾರೆ. ಹೀಗಾಗಿ ನಾಯಕತ್ವದ ಜವಾಬ್ದಾರಿ ರಿಷಭ್​ ಪಂತ್​ಗೆ ನೀಡಲಾಗಿದ್ದು, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ:ರಣಜಿಯಲ್ಲಿ 725ರನ್​​ಗಳ ದಾಖಲೆಯ ಗೆಲುವು.. ದೇಶಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಮುಂಬೈ

ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಋತುರಾಜ್ ಗಾಯಕ್ವಾಡ್​, ಇಶಾನ್ ಕಿಶನ್, ಶ್ರೇಯಸ್​ ಅಯ್ಯರ್​, ರಿಷಭ್ ಪಂತ್​(ವಿ.ಕೀ, ಕ್ಯಾಪ್ಟನ್​), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್​​, ಅಕ್ಸರ್ ಪಟೇಲ್​, ಭುವನೇಶ್ವರ್ ಕುಮಾರ್​, ಹರ್ಷಲ್ ಪಟೇಲ್​, ಆವೇಶ್ ಖಾನ್ ಹಾಗೂ ಯಜುವೇಂದ್ರ ಚಹಲ್​ ಅವಕಾಶ ಪಡೆದುಕೊಳ್ಳುವ ಸಾಧ್ಯತೆ ಇದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗುಜರಾತ್ ಟೈಟನ್ಸ್ ಮುನ್ನಡೆಸಿ ಯಶಸ್ವಿಯಾಗಿರುವ ಹಾರ್ದಿಕ್ ಪಾಂಡ್ಯ, ಅನೇಕ ಏಳು - ಬೀಳಿನ ಬಳಿಕ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. 2021ರ ಐಸಿಸಿ ಟಿ-20 ವಿಶ್ವಕಪ್​​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಪಾಂಡ್ಯ, ಐಪಿಎಲ್​​ನಲ್ಲಿ 15 ಪಂದ್ಯಗಳಿಂದ 487 ರನ್​​ಗಳಿಸಿದ್ದು, 8 ವಿಕೆಟ್ ಸಹ ಪಡೆದುಕೊಂಡಿದ್ದಾರೆ. ಇದರ ಪ್ರದರ್ಶನಕ್ಕೆ ಫಿದಾ ಆಗಿರುವ ಬಿಸಿಸಿಐ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅವಕಾಶ ನೀಡಿದೆ.

ಮೊದಲ ಟಿ-20 ಪಂದ್ಯ ನಾಳೆ ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದ್ದು, ತದನಂತರ ಕ್ರಮವಾಗಿ ಜೂನ್ 12ರಂದು ಕಟಕ್​, ಜೂನ್ 14 ವಿಶಾಖಪಟ್ಟಣಂ, ಜೂನ್​ 17 ರಾಜ್​ಕೋಟ್​ ಹಾಗೂ ಜೂನ್​ 19ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ ನಡೆಯಲಿದೆ.

ABOUT THE AUTHOR

...view details