ಕರ್ನಾಟಕ

karnataka

ಟಾಸ್​​ ಗೆದ್ದ ಶ್ರೀಲಂಕಾ ಬ್ಯಾಟಿಂಗ್​ ಆಯ್ಕೆ, ಪಾಕ್​ ವಿರುದ್ಧ ಸಿಗುವುದೇ ಮೊದಲ ಜಯ!

By ETV Bharat Karnataka Team

Published : Oct 10, 2023, 1:47 PM IST

ICC Cricket World Cup 2023 :ವಿಶ್ವಕಪ್‌ನ ಎಂಟನೇ ಪಂದ್ಯ ಇಂದು ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿದೆ. ಟಾಸ್​ ಗೆದ್ದಿರುವ ಶ್ರೀಲಂಕಾ ಬ್ಯಾಟಿಂಗ್​ ಆಯ್ದುಕೊಂಡಿದೆ.

ICC Cricket World Cup 2023  Sri Lanka won the toss and opt to bat  Lanka won the toss and opt to bat Against Pak  Rajiv Gandhi International Stadium Hyderabad  ಟಾಸ್​​ ಗೆದ್ದ ಶ್ರೀಲಂಕಾ ಬ್ಯಾಟಿಂಗ್​ ಆಯ್ಕೆ  ಪಾಕ್​ ವಿರುದ್ಧ ಸಿಗುವುದೇ ಮೊದಲ ಜಯ  ಎಂಟನೇ ಪಂದ್ಯ ಇಂದು ಪಾಕಿಸ್ತಾನ ಮತ್ತು ಶ್ರೀಲಂಕಾ  ಟಾಸ್​ ಗೆದ್ದಿರುವ ಶ್ರೀಲಂಕಾ ಬ್ಯಾಟಿಂಗ್  ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ  ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯ  ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್  ಪಿಚ್‌ನಲ್ಲಿ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ಸಹಾಯ
ಟಾಸ್​​ ಗೆದ್ದ ಶ್ರೀಲಂಕಾ ಬ್ಯಾಟಿಂಗ್​ ಆಯ್ಕೆ

ಹೈದರಾಬಾದ್​, ತೆಲಂಗಾಣ: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯ ವೀಕ್ಷಿಸಲು ಪ್ರೇಕ್ಷಕರು ಕಿಕ್ಕರಿದು ತುಂಬಿದ್ದಾರೆ. ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಹೈದರಾಬಾದ್ ಪಿಚ್‌ನಲ್ಲಿ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ಸಹಾಯವಾಗುತ್ತದೆ. ಅಭ್ಯಾಸ ಪಂದ್ಯಗಳು ಸೇರಿದಂತೆ ಈ ಟೂರ್ನಿಯಲ್ಲಿ ಇದುವರೆಗೆ ಆಡಿದ ಎಲ್ಲ ಪಂದ್ಯಗಳಲ್ಲಿ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ತೋರಿದ್ದಾರೆ. ಕಳೆದ ಐದು ಪಂದ್ಯಗಳಲ್ಲಿ ಈ ಪಿಚ್‌ನಲ್ಲಿ ಸರಾಸರಿ ಸ್ಕೋರ್ 296 ಆಗಿದೆ.

ಹೈದರಾಬಾದ್‌ನಲ್ಲಿ ಸ್ಪಿನ್ ಬೌಲರ್‌ಗಳು ಪ್ರಮುಖರಾಗಿದ್ದಾರೆ. ಎರಡೂ ತಂಡಗಳು ತಮ್ಮ ಸ್ಪಿನ್ ಬೌಲರ್‌ಗಳಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತವೆ. ಬಾಬರ್ ಅಜಮ್ ನಾಯಕತ್ವದಲ್ಲಿ ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನೆದರ್ಲೆಂಡ್ಸ್ ಅನ್ನು ಸೋಲಿಸಿತು. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ ಸೋತಿದೆ. ಒಟ್ಟಾರೆ ವಿಶ್ವಕಪ್​ನ ದಾಖಲೆಯನ್ನು ಗಮನಿಸಿದರೆ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ದಾಖಲೆ ಅತ್ಯುತ್ತಮವಾಗಿದೆ. ಇವರಿಬ್ಬರ ನಡುವೆ ಇದುವರೆಗೆ 8 ಪಂದ್ಯಗಳು ನಡೆದಿದ್ದು, ಏಳು ಪಂದ್ಯಗಳಲ್ಲಿ ಪಾಕಿಸ್ತಾನ ಗೆದ್ದಿದ್ದು, ಒಂದು ಪಂದ್ಯ ಮಾತ್ರ ಫಲಿತಾಂಶವಿಲ್ಲದೇ ರದ್ದಾಗಿದೆ.

ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆರಂಭಿಕ ಬ್ಯಾಟ್ಸ್‌ಮನ್ ಫಖರ್ ಜಮಾನ್ ಕಳೆದ 10 ಇನ್ನಿಂಗ್ಸ್‌ಗಳಲ್ಲಿ ಉತ್ತಮ ಪ್ರದರ್ಶನ ಕಂಡು ಬಂದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಅವರನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ಅಬ್ದುಲ್ಲಾ ಶಫೀಕ್​ಗೆ ಅವಕಾಶ ನೀಡಿದ್ದಾರೆ. ಇನ್ನು ನಾಯಕ ಬಾಬರ್ ಅಜಮ್ ಕೂಡ ಭಾರತದ ನೆಲದಲ್ಲಿ ದೊಡ್ಡ ಇನ್ನಿಂಗ್ಸ್ ಆಡಲು ಬಯಸುತ್ತಿದ್ದಾರೆ. ಬಾಬರ್​ ಅಜಮ್​ ಮೊದಲ ಪಂದ್ಯದಲ್ಲಿ ಕೇವಲ 5 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾದ ಬ್ಯಾಟ್ಸ್‌ಮನ್‌ಗಳು ತಂಡದ ಸ್ಕೋರ್ ಅನ್ನು 300 ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಆದರೆ ಬೌಲರ್‌ಗಳು ಸಾಕಷ್ಟು ರನ್ ನೀಡಿದ್ದರು. ಆ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಮಹೀಶ್ ತೀಕ್ಷಣ ಗಾಯದ ಸಮಸ್ಯೆಯಿಂದ ಆಡಿರಲಿಲ್ಲ. ಇಂದಿನ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಕ್ಕಿದೆ. ಇದಲ್ಲದೇ ವೇಗಿಗಳಾದ ದಿಲ್ಶಾನ್ ಮಧುಶಂಕ ಹಾಗೂ ಮತಿಶ ಪತಿರಣ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ.

ಪಾಕಿಸ್ತಾನ 11ರ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ನಾಯಕ ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್​), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್..

ಶ್ರೀಲಂಕಾ 11ರ ಬಳಗ:ಪಾತುಮ್ ನಿಸ್ಸಾಂಕ, ಕುಸಲ್ ಪೆರೇರ, ಕುಸಲ್ ಮೆಂಡಿಸ್ (ವಿಕೆಟ್​ ಕೀಪರ್​), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ನಾಯಕ ದಸುನ್ ಶನಕ, ದುನಿತ್ ವೆಲ್ಲಲಾಗೆ, ಮಹೀಶ್ ತೀಕ್ಷಣ, ಮತೀಶ ಪತಿರಣ, ದಿಲ್ಶನ್ ಮಧುಶಂಕ.

ಓದಿ:ICC Cricket World Cup: ಡೇನಿಯಲ್ ವೆಟ್ಟೋರಿ ದಾಖಲೆ ಸರಿಗಟ್ಟಿದ ಸ್ಯಾಂಟ್ನರ್​

ABOUT THE AUTHOR

...view details