ಕರ್ನಾಟಕ

karnataka

ETV Bharat / sports

ಟೂರ್ನಿಯ ದ್ವಿತಿಯಾರ್ಧದಲ್ಲಿ ಆರ್​ಸಿಬಿ ಬ್ಯಾಟಿಂಗ್ ವಿಭಾಗ ವಿಫಲ: ಕೋಚ್ ಕ್ಯಾಟಿಚ್​​​ ಬೇಸರ - ಆರ್‌ಸಿಬಿ ಮುಖ್ಯ ಕೋಚ್ ಸೈಮನ್ ಕ್ಯಾಟಿಚ್

ಐಪಿಎಲ್ ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದ ಬೆಂಗಳೂರು ತಂಡದ ಬ್ಯಾಟಿಂಗ್ ವಿಭಾಗ ದ್ವಿತಿಯಾರ್ಧದಲ್ಲಿ ಸಂಫುರ್ಣ ವೈಫಲ್ಯ ಅನುಭವಿಸಿತು ಎಂದು ಮುಖ್ಯ ಕೋಚ್ ಸೈಮನ್ ಕ್ಯಾಟಿಚ್ ಹೇಳಿದ್ದಾರೆ.

RCB coach Simon Katich
ಸೈಮನ್ ಕ್ಯಾಟಿಚ್

By

Published : Nov 7, 2020, 10:26 AM IST

ಅಬುಧಾಬಿ:ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತೀಯಾರ್ಧದಲ್ಲಿ ಆರ್​ಸಿಬಿ ಬ್ಯಾಟಿಂಗ್ ವಿಭಾಗ ಕೈಕೊಟ್ಟಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮುಖ್ಯ ಕೋಚ್ ಸೈಮನ್ ಕ್ಯಾಟಿಚ್ ಅಭಿಪ್ರಾಯಪಟ್ಟಿದ್ದಾರೆ.

ಟೂರ್ನಿಯ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ತೋರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್​ಮನ್​ಗಳು, ಟೂರ್ನಿಯ ಅಂತಿಮ ಹಂತದ ವೇಳೆ ಉತ್ತಮ ಪ್ರದರ್ಶನ ತೋರಲಿಲ್ಲ ಎಂದು ಮುಖ್ಯ ಕೋಚ್ ಕ್ಯಾಟಿಚ್ ಹೇಳಿದ್ದಾರೆ.

ನಾವು ಆಡಿದ ಮೊದಲ 10 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದೆವು. ಆದರೆ, ನಂತರದ 5 ಪಂದ್ಯಗಳಲ್ಲಿ ನಮ್ಮ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣ ವೈಫಲ್ಯ ಅನುಭವಿಸಿತು ಎಂದಿದ್ದಾರೆ. ಆರಂಭದಲ್ಲಿ ವಿಕೆಟ್ ಪಡೆದ ಹೈದರಾಬಾದ್ ಬೌಲರ್​ಗಳು ನಮ್ಮ ತಂಡದ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು ಎಂದಿದ್ದಾರೆ.

ನಾವು 150 ರನ್​ಗಳಿಸಿದ್ದೆ ನಿಜಕ್ಕೂ ಪಂದ್ಯದ ಫಲಿತಾಂಶ ಬೇರೆಯೇ ಇರುತ್ತಿತ್ತು. ಕೇವಲ 131 ರನ್ ಗಳಿಸಿದ್ದು ನಿರಾಸೆ ಉಂಟು ಮಾಡಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.​

ಶುಕ್ರವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್​ಗಳಿಂದ ಹೈದರಾಬಾದ್ ವಿರುದ್ಧ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದೆ.

ABOUT THE AUTHOR

...view details