ಕರ್ನಾಟಕ

karnataka

ETV Bharat / sports

ಭಾರತದ ಮೇಲೆ ನನಗೆ ತುಂಬಾ ಪ್ರೀತಿ, ಅಲ್ಲಿನ ಜನ ಸುರಕ್ಷಿತವಾಗಿರಬೇಕು.. ಹಿಂದಿಯಲ್ಲಿ ಟ್ವೀಟ್​ ಮಾಡಿ ಪ್ರಾರ್ಥಿಸಿದ ಪೀಟರ್ಸನ್..

ಇಂಗ್ಲೆಂಡ್​ ತಂಡದ ಮಾಜಿ ಆಟಗಾರ ಹಾಗೂ ಕಾಮೆಂಟೇಟರ್ ಕೆವಿನ್ ಪೀಟರ್ಸನ್ ಕೂಡ ಮಾಲ್ಡೀವ್ಸ್‌ನಲ್ಲಿದ್ದಾರೆ. ಪೀಟರ್ಸನ್ ತಮ್ಮ ಟ್ವಿಟರ್​ನಲ್ಲಿ ಹಿಂದಿಯಲ್ಲಿ ಟ್ವೀಟ್​ ಮಾಡಿ ಭಾರತ ಜನರು ಸುರಕ್ಷಿತವಾಗಿ ಇರಿ, ನಿಮಗೆ ಯಾವುದೇ ತೊಂದರೆ ಆಗದಂತೆ ನಾನು ಪ್ರಾರ್ಥಿಸುತ್ತೇನೆ ಎಂದು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ..

By

Published : May 11, 2021, 12:02 PM IST

ಕೆವಿನ್ ಪೀಟರ್ಸನ್
ಕೆವಿನ್ ಪೀಟರ್ಸನ್

ಹೈದರಾಬಾದ್ : ಭಾರತದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಆಟಗಾರರು, ಸಿಬ್ಬಂದಿ ವರ್ಗಕ್ಕೆ ಕೊರೊನಾ ಸೋಂಕು ತಗುಲಿರುವ ಕಾರಣ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ಬಿಸಿಸಿಐ ರದ್ದು ಮಾಡಿ ಅನಿರ್ದಿಷ್ಟಾವಧಿಗೆ ಮೂಂದೂಡಿದೆ.

ಈ ಹಿನ್ನೆಲೆಯಲ್ಲಿ ಬಹುತೇಕ ವಿದೇಶಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಮಾಲ್ಡೀವ್ಸ್‌ಗೆ ಪ್ರಯಾಣ ಬೆಳೆಸಿ ರಿಲ್ಯಾಕ್ಸ್‌ ಮೂಡಿನಲ್ಲಿದ್ದಾರೆ. ಇಂಗ್ಲೆಂಡ್​ ತಂಡದ ಮಾಜಿ ಆಟಗಾರ ಹಾಗೂ ಕಾಮೆಂಟೇಟರ್ ಕೆವಿನ್ ಪೀಟರ್ಸನ್ ಕೂಡ ಮಾಲ್ಡೀವ್ಸ್‌ನಲ್ಲಿದ್ದಾರೆ.

ಪೀಟರ್ಸನ್ ತಮ್ಮ ಟ್ವಿಟರ್​ನಲ್ಲಿ ಹಿಂದಿಯಲ್ಲಿ ಟ್ವೀಟ್​ ಮಾಡಿ ಭಾರತ ಜನರು ಸುರಕ್ಷಿತವಾಗಿ ಇರಿ, ನಿಮಗೆ ಯಾವುದೇ ತೊಂದರೆ ಆಗದಂತೆ ನಾನು ಪ್ರಾರ್ಥಿಸುತ್ತೇನೆ ಎಂದು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದಾರೆ.

"ನಾನು ಭಾರತವನ್ನು ತೊರೆದಿರಬಹುದು. ಆದರೆ, ನನಗೆ ತುಂಬಾ ಪ್ರೀತಿ ಮತ್ತು ವಾತ್ಸಲ್ಯವನ್ನು ನೀಡಿದ ದೇಶದ ಬಗ್ಗೆ ನಾನು ಇನ್ನೂ ಯೋಚಿಸುತ್ತಿದ್ದೇನೆ. ಅಲ್ಲಿನ ಜನರು ಸುರಕ್ಷಿತವಾಗಿರಬೇಕು. ಈ ಸ್ಥಿತಿ ಕಳೆದು ಹೋಗಲಿದೆ. ಆದರೆ, ಜನರು ಎಚ್ಚರವಾಗಿರಬೇಕು" ಎಂದು ಟ್ವೀಟ್​ ಮಾಡಿದ್ದಾರೆ.

For All Latest Updates

ABOUT THE AUTHOR

...view details