ಮುಂಬೈ: ಟೀಂ ಇಂಡಿಯಾ ಬೌಲರ್ ಜಯದೇವ್ ಉನಾದ್ಕತ್ ಕೊರೊನಾ ಹೋರಾಟದಲ್ಲಿ ಕೈಜೋಡಿಸಿದ್ದು, ಐಪಿಎಲ್ ಸಂಬಳದ ಶೇ.10ರಷ್ಟು ದೇಣಿಗೆ ನೀಡಲು ಮುಂದಾಗಿದ್ದಾರೆ.
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಉನಾದ್ಕತ್ ರಾಜಸ್ಥಾನ ರಾಯಲ್ಸ್ ತಂಡದ ಪರ ಆಡುತ್ತಿದ್ದು, ಅವರಿಗೆ 3 ಕೋಟಿ ರೂ. ನೀಡಿ ಖರೀದಿ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್ನಲ್ಲಿ ವಿಡಿಯೋ ಹರಿಬಿಟ್ಟಿರುವ ಬೌಲರ್, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುವ ಉದ್ದೇಶದಿಂದ ಕೈಲಾದ ಸಹಾಯ ಮಾಡಿದ್ದೇನೆ ಎಂದಿದ್ದಾರೆ.