ಅಬುಧಾಬಿ(ಯುಎಇ):ಟಿ20 ವಿಶ್ವಕಪ್ನಲ್ಲಿ ಭಾರತ ವೈಫಲ್ಯ ಅನುಭವಿಸಿದ ಬಳಿಕ ನಾಯಕತ್ವದ ಬದಲಾವಣೆಗೆ ತೀವ್ರ ಒತ್ತಡ ಕೇಳಿಬರುತ್ತಿದೆ. ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಪಟ್ಟ ಕಟ್ಟಲು ಹಲವು ಲೆಜೆಂಡರಿ ಆಟಗಾರರು ಸೂಚಿಸಿದ್ದಾರೆ. ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್ ಕೂಡ ಪಾಂಡ್ಯ ಅವರ ನಾಯಕತ್ವದ ಗುಣಗಳನ್ನು ಶ್ಲಾಘಿಸಿದ್ದು, ಭಾರತ ತಂಡವನ್ನು ಮುನ್ನಡೆಸುವ ಕೌಶಲ್ಯವನ್ನು ಅವರು ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಭಾರತ ತಂಡದ ಬಗ್ಗೆ ಮಾಧ್ಯಮವೊಂದು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಶೀದ್ ಖಾನ್, ನಾನು, ಪಾಂಡ್ಯ ಐಪಿಎಲ್ನ ಗುಜರಾತ್ ಟೈಟನ್ಸ್ ತಂಡದಲ್ಲಿ ಒಟ್ಟಿಗೆ ಆಡಿದ್ದೇವೆ. ಪಾಂಡ್ಯ ತಂಡವನ್ನು ಮುನ್ನಡೆಸಿದ ರೀತಿ ಅಭಿನಂದನಾರ್ಹ. ಅತ್ಯುತ್ತಮ ನಾಯಕತ್ವ ಕೌಶಲ್ಯವನ್ನು ಅವರು ಪ್ರದರ್ಶಿಸಿದರು ಎಂದರು.