ಶಾರ್ಜಾ: ಐಪಿಎಲ್ನ ಮೊದಲಾರ್ಧದಲ್ಲಿ ಅಮೋಘ ಪ್ರದರ್ಶನ ತೋರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ದ್ವಿತೀಯಾರ್ಧದ ತನ್ನ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇದೀಗ ಬದ್ಧ ಎದುರಾಳಿ ಸಿಎಸ್ಕೆ ವಿರುದ್ಧ ಕಣಕ್ಕಿಳಿಯುತ್ತಿದ್ದು, ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್ಸಿಬಿಯ ಹಿಂದಿನ ಮುಖಾಮುಖಿಯಲ್ಲಿ ಜಡೇಜಾ ಆರ್ಭಟಕ್ಕೆ ಸಿಲುಕಿದ ಬೆಂಗಳೂರು 69 ರನ್ಗಳ ಹೀನಾಯ ಸೋಲು ಕಂಡಿತ್ತು. ಚೆನ್ನೈ ಈಗಾಗಲೇ ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ಪ್ಲೇ ಆಫ್ ತಲುಪಲು ಕೊನೆಯ ಮೆಟ್ಟಿಲಲ್ಲಿ ಬಂದು ನಿಂತಿದೆ. ಇದರ ಜೊತೆಗೆ ಕಳೆದ ಪಂದ್ಯದಲ್ಲಿ ಮುಂಬೈನಂತಹ ಬಲಿಷ್ಠ ತಂಡಕ್ಕೆ 20 ರನ್ಗಳ ಸೋಲುಣಿಸಿರುವ ಧೋನಿ ಪಡೆ ಆರ್ಸಿಬಿಗೆ ಸುಲಭದ ತುತ್ತಾಗಲಿದೆ ಎನ್ನುವುದನ್ನು ಕನಸಿನ ಮಾತು.
ಆರ್ಸಿಬಿಗೆ ಈ ಪಂದ್ಯವನ್ನು ಗೆಲ್ಲಬೇಕಾದರೆ ಬಲಿಷ್ಠ ಬೌಲಿಂಗ್ ಪಡೆ ಹೊಂದಿರುವ ಸಿಎಸ್ಕೆ ವಿರುದ್ಧ ತಮ್ಮ ಬ್ಯಾಟಿಂಗ್ ಪ್ರದರ್ಶನವನ್ನು ಉತ್ತಮಗೊಳಿಸಿಕೊಳ್ಳಬೇಕಾಗಿದೆ. ಅದರಲ್ಲೂ ಆರಂಭಿಕರಾದ ದೇವದತ್ ಪಡಿಕ್ಕಲ್(233) ಮತ್ತು ವಿರಾಟ್ ಕೊಹ್ಲಿ(203) ಉತ್ತಮ ಆರಂಭ ಒದಗಿಸಿಕೊಡಬೇಕಾಗಿದೆ.
ಇವರಿಬ್ಬರ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿರುವ ಗ್ಲೇನ್ ಮ್ಯಾಕ್ಸ್ವೆಲ್(233), ಎಬಿಡಿ ವಿಲಿಯರ್ಸ್(207) ಕೂಡ ಸಿಎಸ್ಕೆ ದಾಳಿಯನ್ನು ಸಮರ್ಥವಾಗಿ ಎದುರಿಸಬೇಕಾಗಿದೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್ ಮತ್ತು ಸಿರಾಜ್ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಆದರೆ ಇವರಿಗೆ ವಿದೇಶಿ ಬೌಲರ್ಗಳಿಂದ ಸೂಕ್ತ ಬೆಂಬಲ ಸಿಗುತ್ತಿಲ್ಲ. ಕೈಲ್ ಜೆಮೀಸನ್ ತಾವೂ ಪಡೆದಿರುವ ಮೊತ್ತಕ್ಕೆ ಸೂಕ್ತ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಹೊಸದಾಗಿ ತಂಡ ಸೇರಿರುವ ವನಿಂದು ಹಸರಂಗ ಅನುಭವಿ ಚಹಾಲ್ ಕೆಕೆಆರ್ ವಿರುದ್ಧ 10ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ. ಆದರ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಲಯಕ್ಕೆ ಮರಳುವುದು ತಂಡಕ್ಕೆ ಅನಿವಾರ್ಯವಾಗಿದೆ.