ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವಿವಿಧ ತಂಡಗಳಿಗೆ ವಿದೇಶಿ ಕೋಚ್ಗಳ ನೇಮಕದ ಬಗ್ಗೆ ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್ ಪ್ರಶ್ನೆ ಮಾಡಿದ್ದಾರೆ. ವಿದೇಶಿ ಕೋಚ್ಗಳ ನೇಮಕ ಭಾರತೀಯ ಕ್ರಿಕೆಟ್ಗೆ ಅನಾನುಕೂಲ ಮಾಡಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಐಪಿಎಲ್ನಲ್ಲಿ ಭಾರತೀಯ ಆಟಗಾರರ ಬಗ್ಗೆ ವಿದೇಶಿ ಕೋಚ್ಗಳು ಮಾಹಿತಿ ಪಡೆದುಕೊಳ್ಳುತ್ತಿರುವ ಅಂಶದ ಬಗ್ಗೆ ಬೆಳಕು ಚೆಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಶ್ರೇಯಸ್ ಅಯ್ಯರ್ ಶಾಟ್ ಬಾಲ್ಗೆ ವಿಕೆಟ್ ಒಪ್ಪಿಸಿದ್ದರು. ಈ ವಿಚಾರ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಐಪಿಎಲ್ನಲ್ಲಿ ಶ್ರೇಯಸ್ ಅಯ್ಯರ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದು, ಅದ ತಂಡಕ್ಕೆ ಬ್ರೆಂಡನ್ ಮೆಕ್ಕಲಂ ಕೋಚ್ ಆಗಿದ್ದಾರೆ.
ಸದ್ಯ ಇಂಗ್ಲೆಂಡ್ ತಂಡದ ಕೋಚ್ ಆಗಿರುವ ಮೆಕ್ಕಲಂಗೆ ಅಯ್ಯರ್ ಬ್ಯಾಟಿಂಗ್ ದೌರ್ಬಲ್ಯದ ಬಗ್ಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿಯೇ ಇಂಗ್ಲೆಂಡ್ ಟೆಸ್ಟ್ ತಂಡದ ನೂತನ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಬ್ರೆಂಡನ್ ಮೆಕ್ಕಲಂ, ಬೌಲರ್ಗಳಿಗೆ ಶ್ರೇಯಸ್ ಅಯ್ಯರ್ ಎದುರು ಶಾರ್ಟ್ ಬಾಲ್ ಎಸೆಯಲು ಸೂಚನೆ ಕೊಟ್ಟಿದ್ದರು. ಬ್ರೆಂಡನ್ ಮೆಕ್ಕಲಂ ಅವರ ತಂತ್ರ ಫಲಕೊಟ್ಟಿತ್ತು.