ಕರ್ನಾಟಕ

karnataka

By

Published : Feb 23, 2022, 12:00 PM IST

ETV Bharat / sports

ಶ್ರೀಲಂಕಾ ವಿರುದ್ಧದ ಸರಣಿಯಿಂದ ದೀಪಕ್‌ ಚಹರ್‌, ಸೂರ್ಯಕುಮಾರ್​ ಯಾದವ್‌​ ಔಟ್​

ಗಾಯಗೊಂಡಿರುವ ವೇಗದ ಬೌಲರ್ ದೀಪಕ್ ಚಹರ್ ಮತ್ತು ಬ್ಯಾಟರ್ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧದ T-20 ಸರಣಿಯಿಂದ ಹೊರಗುಳಿದಿದ್ದಾರೆ.

Deepak Chahar
ಸೂರ್ಯಕುಮಾರ್

ನವದೆಹಲಿ:ಗಾಯಗೊಂಡಿರುವ ವೇಗಿ ದೀಪಕ್ ಚಹರ್ ಮತ್ತು ಬ್ಯಾಟರ್ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಿಂದ ಹೊರಗುಳಿದಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡರೆ, ಬೌಲಿಂಗ್​ ವೇಳೆ ದೀಪಕ್ ಚಹರ್​ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇಬ್ಬರೂ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಂಡ ಭಾರತ, ಗುರುವಾರದಿಂದ ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ ಸರಣಿಯನ್ನೂ ಜಯಿಸುವ ಉತ್ಸಾಹದಲ್ಲಿದೆ.

ಅಲ್ಲದೇ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್​ ಕಿಂಗ್​ ವಿರಾಟ್ ಕೊಹ್ಲಿ, ವಿಕೆಟ್​ ಕೀಪರ್​ ರಿಷಬ್ ಪಂತ್ ಮತ್ತು ಬೌಲರ್​ ಶಾರ್ದೂಲ್ ಠಾಕೂರ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಋತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್​ಗೆ ಅವಕಾಶ ನೀಡಲಾಗಿದೆ.

ಶ್ರೀಲಂಕಾ ಸರಣಿಗೆ ಭಾರತದ ತಂಡ ಇಂತಿದೆ:ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಮೌಹ್ದ್ ಯಾದವ್, ಸಿರಾಜ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

ಇದನ್ನೂ ಓದಿ:ಏರ್​ಥಿಂಗ್​ ಮಾಸ್ಟರ್ಸ್​ ಟೂರ್ನಿಯಿಂದ ಹೊರಬಿದ್ದ ಲಿಟ್ಲ್ ಗ್ರ್ಯಾಂಡ್​ ಮಾಸ್ಟರ್​ ಪ್ರಜ್ಞಾನಂದ್

ABOUT THE AUTHOR

...view details