ಮುಂಬೈ:ಬಹುನಿರೀಕ್ಷಿತಏಷ್ಯಾಕಪ್ ಟಿ20 ಟೂರ್ನಿ ಆರಂಭಗೊಳ್ಳಲು ಕೆಲವೇ ದಿನ ಮಾತ್ರ ಬಾಕಿ ಉಳಿದಿವೆ. ಇದಕ್ಕಾಗಿ ಈಗಾಗಲೇ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿಯೂ ಇದ್ದು, ಟೂರ್ನಿಗೋಸ್ಕರ ಕಸರತ್ತು ನಡೆಸ್ತಿದ್ದಾರೆ.
ಕಳೆದ ಮೂರು ವರ್ಷಗಳಿಂದ ರನ್ ಬರ ಎದುರಿಸುತ್ತಿರುವ ಕೊಹ್ಲಿ, ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ಪ್ರವಾಸದಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಆದರೆ, ಏಷ್ಯಾಕಪ್ನಲ್ಲಿ ಮಿಂಚು ಹರಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸುವ ತವಕ ಅವರದ್ದು. ಇದಕ್ಕಾಗಿ ರನ್ ಮಷಿನ್ ಖ್ಯಾತಿಯ ಆಟಗಾರ ಜಿಮ್ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ಬೆವರು ಸುರಿಸುತ್ತಿದ್ದಾರೆ.
ಇದನ್ನೂ ಓದಿ:ಏಷ್ಯಾಕಪ್ಗೋಸ್ಕರ ಅಭ್ಯಾಸ ಆರಂಭಿಸಿದ ಕೊಹ್ಲಿ: 100ನೇ ಟಿ20 ಪಂದ್ಯಕ್ಕೆ ತಯಾರಿ