ಮುಂಬೈ: 2022ರ ಆವೃತ್ತಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ವೇಗಿ ಉಮ್ರಾನ್ ಮಲಿಕ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಕ್ರಿಕೆಟ್ ಅಭಿಮಾನಿಗಳ ಮತ್ತು ಕ್ರಿಕೆಟ್ ತಜ್ಞರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಭಾನುವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೋಡಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಶ್ಮೀರಿ ವೇಗಿ ಆದಷ್ಟು ಬೇಗ ಭಾರತ ತಂಡದಲ್ಲಿ ಆಡುವಂತಾಗಲಿ ಎಂದು ಆಶಿಸಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಉಮ್ರಾನ್ 20ನೇ ಓವರ್ನಲ್ಲಿ 4 ವಿಕೆಟ್ ಜೊತೆಗೆ ಮೇಡನ್ ಪಡೆದಿದ್ದರು. ಒಟ್ಟಾರೆ ಪಂದ್ಯದಲ್ಲಿ 28ರನ್ ನೀಡಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಆರಂಭಿಕ ಪಂದ್ಯಗಳಲ್ಲಿ ಕೇವಲ ವೇಗದ ಎಸೆತಗಳಿಂದ ಗಮನ ಸೆಳೆದಿದ್ದ ಅವರು ಕಳೆದ ಒಂದೆರಡು ಪಂದ್ಯಗಳಲ್ಲಿ ವಿಕೆಟ್ಗಳನ್ನು ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಇಂದಿನ ಪ್ರದರ್ಶನವನ್ನು ಕಂಡು ಇಂಗ್ಲೆಂಡ್ ತಂಡದ ನಾಯಕ ಕೆವಿನ್ ಪೀಟರ್ಸನ್ ಯುವ ವೇಗಿಯ ಹೆಸರನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿ ಅವರ ವೇಗವನ್ನು ರಾಕೆಟ್ಗೆ ಹೋಲಿಸಿದ್ದರು. ಈ ಟ್ವೀಟ್ ಫೋಟೋವನ್ನು ಇಎಸ್ಪಿಎನ್ ತನ್ನ ಟ್ವಿಟರ್ನಲ್ಲಿ ಪ್ರಕಟಿಸಿ, ಉಮ್ರಾನ್ ಮಲಿಕ್ ಐಪಿಎಲ್ಅನ್ನು ವಿದೇಶಕ್ಕೂ ಕೊಂಡೊಯ್ದಿದ್ದಾರೆ ಎಂದು ಬರೆದು ಶೇರ್ ಮಾಡಿಕೊಂಡಿತ್ತು.