ಕರ್ನಾಟಕ

karnataka

By

Published : May 26, 2021, 3:53 PM IST

ETV Bharat / sports

ಛತ್ರಸಾಲ್ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್​ರ ನಾಲ್ವರು ಸಹಚರರ ಬಂಧನ

ಛತ್ರಸಾಲ್‌ ಕ್ರೀಡಾಂಗಣದಲ್ಲಿ ಮೇ 4ರ ಮಧ್ಯರಾತ್ರಿ ಕುಸ್ತಿಪಟು ಸಾಗರ್‌ ರಾಣಾ ಅವರನ್ನು ಹತ್ಯೆ ಮಾಡಲಾಗಿತ್ತು. ಇವರ ಇಬ್ಬರು ಸ್ನೇಹಿತರಿಗೆ ಮಾರಣಾಂತಿಕ ಗಾಯವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶೀಲ್ ಮತ್ತು ಅವರ ಸ್ನೇಹಿತ ಅಜಯ್‌ ಅವರನ್ನು ಸೋಮವಾರ ದೆಹಲಿ ಪೊಲೀಸ್‌ ಬಂಧಿಸಿದ್ದರು.

ಛತ್ರಸಾಲ್ ಕೊಲೆ ಪ್ರಕರಣ
ಛತ್ರಸಾಲ್ ಕೊಲೆ ಪ್ರಕರಣ

ನವದೆಹಲಿ: ಕುಸ್ತಿಪಟು ಸಾಗರ್‌ ರಾಣಾ ಧಂಕರ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಸುಶೀಲ್‌ ಕುಮಾರ್‌ ಅವರ ನಾಲ್ವರು ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ಬಂಧಿತರಾದ ಭೂಪೇಂದರ್‌(38), ಮೋಹಿತ್‌(22), ಗುಲಾಬ್‌(24) ಮತ್ತು ರೋಹ್ಟಕ್‌ ನಿವಾಸಿ ಮಂಜೀತ್‌(29) ಸುಶೀಲ್ ಕುಮಾರ್​ ಅವರ ಸಹವರ್ತಿಗಳಾಗಿ ಗುರುತಿಸಿಕೊಂಡಿದ್ದರು. ಅಲ್ಲದೇ ಕಲಾ ಅಸೌದ ಮತ್ತು ನೀರಜ್ ಬವಾನಾ ಗ್ಯಾಂಗ್‌ನ ಸಕ್ರಿಯ ಸದಸ್ಯರಾಗಿದ್ದರು. ಇದೀಗ ಇವರೆಲ್ಲರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ:ಕುಸ್ತಿಪಟು ಸುಶೀಲ್ ಕುಮಾರ್​ಗೆ ಮರಣದಂಡನೆ ವಿಧಿಸಿ: ಮೃತ ಸಾಗರ್​ ತಾಯಿ ಆಗ್ರಹ

ನಿರ್ದಿಷ್ಟ ಮಾಹಿತಿಯ ಮೇರೆಗೆ ರೋಹಿಣಿ ಜಿಲ್ಲಾ ದೆಹಲಿ ಪೊಲೀಸರ ವಿಶೇಷ ಸಿಬ್ಬಂದಿ ಗೆವೆರಾ ರೈಲ್ವೆ ಕ್ರಾಸಿಂಗ್ ಬಳಿ ಈ ನಾಲ್ವರನ್ನು ಬಂಧಿಸಿದ್ದಾರೆ. " ಬಂಧಿತರನ್ನು ವಿಚಾರಣೆಗೆ ಒಳಪಡಿಸಿದ ನಂತರ, ಘಟನೆ ನಡೆದ ಸ್ಥಳಕ್ಕೆ ತಾವೂ ಮೇ 4 ರಂದು ತೆರೆಳಿದ್ದೆವು, ಆದರೆ, ಬೇರೆಯವರು ಈ ಹತ್ಯೆ ನಡೆಸಿದ್ದಾಗಿ ಮತ್ತು ಆ ಸ್ಥಳದಲ್ಲಿ ತಮ್ಮ ವಾಹನಗಳನ್ನು ಮತ್ತು ಆಯುಧಗಳನ್ನು ಬಿಟ್ಟು ಪರಾರಿಯಾಗಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ಹತ್ಯೆಯಲ್ಲಿ ಭಾಗಿಯಾಗಿದ್ದವರ ವಿವರಗಳನ್ನು ನೀಡಿದ್ದಾರೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

ಛತ್ರಸಾಲ್‌ ಕ್ರೀಡಾಂಗಣದಲ್ಲಿ ಮೇ 4ರ ಮಧ್ಯರಾತ್ರಿ ಕುಸ್ತಿಪಟು ಸಾಗರ್‌ ರಾಣಾ ಅವರನ್ನು ಹತ್ಯೆ ಮಾಡಲಾಗಿತ್ತು. ಇವರ ಇಬ್ಬರು ಸ್ನೇಹಿತರಿಗೆ ಮಾರಣಾಂತಿಕ ಗಾಯವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶೀಲ್ ಮತ್ತು ಅವರ ಸ್ನೇಹಿತ ಅಜಯ್‌ ಅವರನ್ನು ಸೋಮವಾರ ದೆಹಲಿ ಪೊಲೀಸ್‌ ಬಂಧಿಸಿದ್ದರು.

ABOUT THE AUTHOR

...view details