ಬಾಗಲಕೋಟೆ: ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಸಿಬ್ಬಂದಿವೋರ್ವ ಲಂಚದ ಹಣವನ್ನು ತೆಗೆದುಕೊಂಡು ಹೋಗುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ಕಾರು ಸಮೇತ ಲಕ್ಷಾಂತರ ರೂಪಾಯಿಯನ್ನು ವಶಕ್ಕೆ ಪಡೆದ ಘಟನೆ ನಗರದಲ್ಲಿ ನಡೆದಿದೆ.
ಮಹಾಂತೇಶ ವಿರುಪಾಕ್ಷ ನಿಡಸೂರ ಎಂಬ ಸಿಬ್ಬಂದಿ ಪರ್ಸೆಂಟೇಜ್ ಆಧಾರದಲ್ಲಿ ಅಕ್ರಮವಾಗಿ ಲಂಚದ ಹಣವನ್ನು ಸಂಗ್ರಹಿಸಿಕೊಂಡು ಕಾರಿನಲ್ಲಿ ಹೋಗಿದ್ದಾರೆ.