ಬಾಗಲಕೋಟೆ:ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 2019-20 ಹಾಗೂ ಪ್ರಸಕ್ತ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ವಿವಿಧ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿ.ಪಂ. ಸಿಇಓ ಟಿ.ಭೂಬಾಲನ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಉದ್ಯೋಗ ಖಾತರಿ ಯೋಜನೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಪ್ರಶಸ್ತಿ - Achieved Staff
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
![ಉದ್ಯೋಗ ಖಾತರಿ ಯೋಜನೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಪ್ರಶಸ್ತಿ Award Distribution to Achieved Staff](https://etvbharatimages.akamaized.net/etvbharat/prod-images/768-512-8596551-614-8596551-1598630351427.jpg)
ಸಾಧನೆ ಮಾಡಿದ ಸಿಬ್ಬಂದಿಗೆ ಪ್ರಶಸ್ತಿ ವಿತರಣೆ
ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್ನಲ್ಲಿ ಇಂದು ನಡೆದ ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ, ಸಿಬ್ಬಂದಿ ಹಾಗೂ ಮೇಟ್ಸ್ ಸೇರಿದಂತೆ 23 ಜನರಿಗೆ ಪ್ರಶಸ್ತಿ ನೀಡಿ ಭೂಬಾಲನ ಗೌರವಿಸಿದರು.
ಇನ್ನೂ ಉತ್ತಮ ಸಾಧನೆ ಮಾಡುವಂತೆ ಪ್ರೇರಣೆ ನೀಡುವುದು ಅಗತ್ಯವಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು.