ಕರ್ನಾಟಕ

karnataka

ಜಾನಪದ ಗೀತೆ ಮೂಲಕ ತಂಬಾಕು ಸೇವನೆ ದುಷ್ಪರಿಣಾಮದ ಕುರಿತು ಜಾಗೃತಿ

By

Published : Mar 21, 2019, 7:37 AM IST

ತಂಬಾಕು ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಬೀದಿ ನಾಟಕ ಹಾಗೂ ಜಾನಪದ ಗೀತೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಜಾನಪದ ಗೀತೆ

ಬಾಗಲಕೋಟೆ: ತಂಬಾಕು ಆರೋಗ್ಯಕ್ಕೆ ಹಾನಿಕಾರಕ. ಅದರಿಂದ ನಿಮ್ಮನ್ನು ನಂಬಿರುವ ನಿಮ್ಮ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಯುವಕರೇ ತಂಬಾಕು ಸೇವನೆ ಬಿಡಿ, ಉತ್ತಮ ಆಹಾರ ಸೇವನೆ ಮಾಡಿ ಆರೋಗ್ಯವನ್ನು ಕಾಪಾಡಿಕೊಂಡು ಸುಂದರ ಜೀವನ ನಿರ್ಮಿಸಿಕೊಳ್ಳಿ ಎಂದು ಜಾನಪದ ಹಾಡಿನ ಮುಖಾಂತರ ಸಾರ್ವಜನಿಕರನ್ನು ಸೆಳೆಯಲಾಯಿತು.

ಹೌದು.., ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಗೌರಿ-ಗಣೇಶ ಸಾಂಸ್ಕೃತಿಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆ - ಕೆರೂರ ಸಹಯೋಗದೊಂದಿಗೆ ಸಮಾಜದಲ್ಲಿ ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಬೀದಿ ನಾಟಕ ಹಮ್ಮಿಕೊಳ್ಳಲಾಗಿತ್ತು. ಜಾನಪದ ಗೀತೆಗಳನ್ನು ಹಾಡಿ ತಂಬಾಕು ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಯಿತು.

ABOUT THE AUTHOR

...view details