ಕರ್ನಾಟಕ

karnataka

By

Published : Aug 13, 2020, 4:14 PM IST

ETV Bharat / state

ಕೊರೊನಾ ಸೋಂಕಿನಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​​ ಗುಣಮುಖ

ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​​ ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

Vijayananda kashappa recovered from corona
Vijayananda kashappa recovered from corona

ಬಾಗಲಕೋಟೆ: ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​​ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಹತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ವರದಿ ಬಂದ ಹಿನ್ನೆಲೆ ನಗರದ ಎಸ್.ನಿಜಲಿಂಗಪ್ಪ ಕುಮಾರೇಶ್ವರ ಮೆಡಿಕಲ್ ಕಾಲೇಜ್​​ನ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರ ಪತ್ನಿ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್​ಗೂ ಸಹ ಸೋಂಕು ದೃಢಪಟ್ಟಿದ್ದು ಇಬ್ಬರೂ ಸಹ ಅದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಇಬ್ಬರೂ ಸಹ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹುನಗುಂದದಿಂದ ಕಾಶಪ್ಪನವರ್​​ ಆಪ್ತರು, ಅಭಿಮಾನಿಗಳು, ಬೆಂಬಲಿಗರು ಆಗಮಿಸಿ, ಮಾರ್ಲಾಪಣೆ ಮಾಡಿ, ಹೂ ಮಾಲೆ ಹಾಕಿ ಸ್ವಾಗತಿಸಿದರು.

ABOUT THE AUTHOR

...view details