ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ 'ಕೈ' ಹಾಗೂ 'ತೆನೆ' ಪಕ್ಷಗಳ ವಿರುದ್ಧ ಅಶ್ವತ್ಥ ನಾರಾಯಣ ವಾಗ್ದಾಳಿ - undefined

ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದವರು ಜಾತಿ ರಾಜಕಾರಣವನ್ನೇ ಲೋಕಸಭಾ ಚುನಾವಣೆಗೆ ಪ್ರಮುಖ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ. ಸಮಾಜದ ಚಿಂತನೆ ಹಾಗೂ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಇಂತಹ ನಾಯಕರು ಮತ ಕೇಳಲು ಬಂದಾಗ ಸೂಕ್ತ ಉತ್ತರ‌ ನೀಡಿ ಎಂದ ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಕರೆ ನೀಡಿದರು.

ಅಶ್ವತ್ಥ ನಾರಾಯಣ

By

Published : Apr 20, 2019, 5:02 PM IST

ಬಾಗಲಕೋಟೆ: ಚುನಾವಣೆಗೂ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್‌ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾ ಈಗಾಗಲೇ ಸೀಟ್​ ಬುಕ್ ಮಾಡುತ್ತಿದ್ದಾರೆ. ಇಂತಹ ನಾಯಕರು ಜನತೆಯಲ್ಲಿ ಹೇಗೆ ಮತ ಕೇಳುತ್ತಿದ್ದಾರೆ? ಎಂದು ಬಿಜೆಪಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಅಶ್ವತ್ಥ ನಾರಾಯಣ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಹಾಗು ಜೆಡಿಎಸ್‌ ನಾಯಕರ ವಿರುದ್ಧ ಅಶ್ವತ್ಥ ನಾರಾಯಣ ವಾಗ್ದಾಳಿ

ನಗರದ ಪ್ರೆಸ್ ಕ್ಲಬ್​ನಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು,ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಮಾಡಿರುವ ಅಭಿವೃದ್ಧಿ ಪ್ರಮುಖವಾಗಿದೆ. ಹೀಗಾಗಿ ಅವರ ಹೆಸರಿನಲ್ಲಿ ಮತ ಕೇಳಲು ಹೋಗುತ್ತಿದ್ದೇವೆ ಎಂದರು.

ಅಭ್ಯರ್ಥಿ ಹೆಸರು ಹೇಳದೆಯೇ ಮೋದಿ ಅವರು ಪ್ರಚಾರ ಭಾಷಣ ಮಾಡುತ್ತಾರಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕ್ಷೇತ್ರದಲ್ಲಿ ಪಿ.ಸಿ.ಗದ್ದಿಗೌಡರ ಮೂರು ಅವಧಿಗೆ ಸಂಸದರಾಗಿ ಆಯ್ಕೆ ಕೆಲಸ ಮಾಡಿದ್ದಾರೆ. ಅವರ ಹೆಸರು ಎಲ್ಲರಿಗೂ ತಿಳಿದಿದೆ. ಆದರೆ ಇಡೀ ದೇಶದ ಅಭಿವೃದ್ಧಿಗೆ ಮೋದಿಯವರ ಪಾತ್ರ ಇರುವುದರಿಂದ ಅವರ ಹೆಸರನಲ್ಲಿ ಹೋಗುವ ಮೂಲಕ ದೇಶದಲ್ಲಿ ಬದಲಾವಣೆ ಸಾಧ್ಯ ಎಂದರು.

ಈ ಭಾರಿ ರಾಜ್ಯದ 22 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

...view details