ಕರ್ನಾಟಕ

karnataka

By

Published : Oct 30, 2020, 3:21 PM IST

Updated : Oct 30, 2020, 4:42 PM IST

ETV Bharat / state

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

ಇಬ್ಬರು ಬಾಲಕರು ನಿನ್ನೆ ಸಂಜೆ ನದಿಗೆ ಈಜಲು ಹೋಗಿದ್ದವರು ವಾಪಸ್​ ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಟ ನಡೆಸಿದಾಗ ವಿಷಯ ಬೆಳಕಿಗೆ ಬಂದಿದೆ. ಬೆಳಗ್ಗೆ ಕಾರ್ಯಾಚರಣೆ ನಡೆಸಿ ಬಾಲಕರ ಮೃತದೇಹ ಹೊರ ತೆಗೆಯಲಾಗಿದೆ.

death-of-two-young
ಬಾಲಕರ ಸಾವು

ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲು ಗ್ರಾಮದ ಬಳಿ ಜರುಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬಾಲಕರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

ಬಸವರಾಜ ಮಹಾಂತಯ್ಯ ಹಿರೇಮಠ(12), ಪ್ರವೀಣ ರೋಣದ(12) ಮೃತ ಬಾಲಕರು. ಈ ಇಬ್ಬರು ಬಾಚಿನಗುಡ್ಡ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ನಿನ್ನೆ ಸಂಜೆ ನದಿಗೆ ಈಜಲು ಹೋಗಿದ್ದವರು ವಾಪಸ್​ ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಟ ನಡೆಸಿದಾಗ ವಿಷಯ ಬೆಳಕಿಗೆ ಬಂದಿದೆ.

ಬಾಲಕರಿಗಾಗಿ ಹುಡುಕಾಟ

ಬೆಳಗ್ಗೆ ಕಾರ್ಯಾಚರಣೆ ನಡೆಸಿ ಬಾಲಕರ ಮೃತದೇಹ ಹೊರ ತೆಗೆಯಲಾಗಿದೆ. ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Last Updated : Oct 30, 2020, 4:42 PM IST

ABOUT THE AUTHOR

...view details